ಭಾರತೀಯ ಹವಮಾನ ಇಲಾಖೆಯ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಮಳೆ ಒಂದು ವಾರ ತಡವಾಗಿ ಆಗಮಿಸಿದೆ, ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಹೆಚ್ಚು ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ, ಮತ್ತು ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ಜೂನ್ ಮತ್ತು ಜುಲೈ ತಿಂಗಳ ಆರಂಭದಲ್ಲಿ ಬೀಳುವ ಮಳೆಯನ್ನು ಪೋಲಾಗದಂತೆ ತಡೆದು ಹಲವು ವಿಧಗಳಲ್ಲಿ ಶೇಖರಿಸಿಕೊಂಡು ವಾಡಿಕೆಗಿಂತ ಕಡಿಮೆ ಮಳೆಯಾದ ಸಂದರ್ಭದಲ್ಲಿ ನೀರನ್ನು ಮರು ಬಳಕೆ ಮಾಡಿಕೊಳ್ಳಬಹುದು ಇದರಿಂದ ಬರಗಾಲವನ್ನು ಎದುರಿಸಲು ಅನುಕೂಲವಾಗಲಿದೆ ಎಂದರು.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿಗೆ ಸಂಬಂಧಿಸಿದ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…