ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ.
ಕಾರು ದೊಡ್ಡಬಳ್ಳಾಪುರದಿಂದ ನೆಲಮಂಗಲದ ಕಡೆಗೆ ತೆರಳುತ್ತಿತ್ತು. ಇದೇ ವೇಳೆ ಲಾರಿ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದಾಗ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.
ಈ ಪ್ರದೇಶದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಅಪಘಾತದ ಹಾಟ್ಸ್ಪಾಟ್ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…
ದೊಡ್ಡಬಳ್ಳಾಪುರ: ತ್ರಿಬಲ್ ರೈಡಿಂಗ್ನಲ್ಲಿ ತೆರಳುತ್ತಿದ್ದ ಬೈಕ್ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…