ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ, ಟ್ಯಾಂಕ್ನಿಂದ ಡೀಸೆಲ್ ಸೋರಿಕೆಯಾಗಿ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ.
ಲಾರಿ ಬಿದ್ದ ರಭಸಕ್ಕೆ ಟ್ಯಾಂಕ್ನಲ್ಲಿದ್ದ ಡೀಸೆಲ್ ರಸ್ತೆಯ ಮೇಲೆಲ್ಲಾ ಚೆಲ್ಲಿದ್ದರಿಂದ ರಸ್ತೆ ಜಾರುವಂತಾಗಿತ್ತು. ಇದರಿಂದ ದ್ವಿಚಕ್ರ ವಾಹನಗಳು ಸ್ಕಿಡ್ ಆಗುವ ಹಾಗೂ ಇತರೆ ವಾಹನಗಳಿಗೆ ಅಪಘಾತ ಸಂಭವಿಸುವ ಆತಂಕ ಎದುರಾಗಿತ್ತು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ 112 ತುರ್ತು ವಾಹನ ಚಾಲಕರಾದ ಅರುಣ ರಾವಳ ಹಾಗೂ ವಿನಾಯಕ್ ಎಲ್ ಅವರು, ಸಂಭಾವ್ಯ ಅನಾಹುತ ತಪ್ಪಿಸಲು ಕೂಡಲೇ ಕಾರ್ಯಪ್ರವೃತ್ತರಾದರು. ರಸ್ತೆಗೆ ಮಣ್ಣು ಮತ್ತು ನೀರನ್ನು ಸಿಂಪಡಿಸಿ, ಜಾರುತ್ತಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಾಹನ ಸವಾರರ ಹಿತದೃಷ್ಟಿಯಿಂದ 112 ಸಿಬ್ಬಂದಿ ತೋರಿದ ಈ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಚರಣೆಯನ್ನು ಇಲಾಖೆ ಹಾಗೂ ಸಾರ್ವಜನಿಕರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…