ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ, ಟ್ಯಾಂಕ್ನಿಂದ ಡೀಸೆಲ್ ಸೋರಿಕೆಯಾಗಿ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ.
ಲಾರಿ ಬಿದ್ದ ರಭಸಕ್ಕೆ ಟ್ಯಾಂಕ್ನಲ್ಲಿದ್ದ ಡೀಸೆಲ್ ರಸ್ತೆಯ ಮೇಲೆಲ್ಲಾ ಚೆಲ್ಲಿದ್ದರಿಂದ ರಸ್ತೆ ಜಾರುವಂತಾಗಿತ್ತು. ಇದರಿಂದ ದ್ವಿಚಕ್ರ ವಾಹನಗಳು ಸ್ಕಿಡ್ ಆಗುವ ಹಾಗೂ ಇತರೆ ವಾಹನಗಳಿಗೆ ಅಪಘಾತ ಸಂಭವಿಸುವ ಆತಂಕ ಎದುರಾಗಿತ್ತು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ 112 ತುರ್ತು ವಾಹನ ಚಾಲಕರಾದ ಅರುಣ ರಾವಳ ಹಾಗೂ ವಿನಾಯಕ್ ಎಲ್ ಅವರು, ಸಂಭಾವ್ಯ ಅನಾಹುತ ತಪ್ಪಿಸಲು ಕೂಡಲೇ ಕಾರ್ಯಪ್ರವೃತ್ತರಾದರು. ರಸ್ತೆಗೆ ಮಣ್ಣು ಮತ್ತು ನೀರನ್ನು ಸಿಂಪಡಿಸಿ, ಜಾರುತ್ತಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಾಹನ ಸವಾರರ ಹಿತದೃಷ್ಟಿಯಿಂದ 112 ಸಿಬ್ಬಂದಿ ತೋರಿದ ಈ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಚರಣೆಯನ್ನು ಇಲಾಖೆ ಹಾಗೂ ಸಾರ್ವಜನಿಕರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…