ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ, ಟ್ಯಾಂಕ್ನಿಂದ ಡೀಸೆಲ್ ಸೋರಿಕೆಯಾಗಿ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ.
ಲಾರಿ ಬಿದ್ದ ರಭಸಕ್ಕೆ ಟ್ಯಾಂಕ್ನಲ್ಲಿದ್ದ ಡೀಸೆಲ್ ರಸ್ತೆಯ ಮೇಲೆಲ್ಲಾ ಚೆಲ್ಲಿದ್ದರಿಂದ ರಸ್ತೆ ಜಾರುವಂತಾಗಿತ್ತು. ಇದರಿಂದ ದ್ವಿಚಕ್ರ ವಾಹನಗಳು ಸ್ಕಿಡ್ ಆಗುವ ಹಾಗೂ ಇತರೆ ವಾಹನಗಳಿಗೆ ಅಪಘಾತ ಸಂಭವಿಸುವ ಆತಂಕ ಎದುರಾಗಿತ್ತು.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ 112 ತುರ್ತು ವಾಹನ ಚಾಲಕರಾದ ಅರುಣ ರಾವಳ ಹಾಗೂ ವಿನಾಯಕ್ ಎಲ್ ಅವರು, ಸಂಭಾವ್ಯ ಅನಾಹುತ ತಪ್ಪಿಸಲು ಕೂಡಲೇ ಕಾರ್ಯಪ್ರವೃತ್ತರಾದರು. ರಸ್ತೆಗೆ ಮಣ್ಣು ಮತ್ತು ನೀರನ್ನು ಸಿಂಪಡಿಸಿ, ಜಾರುತ್ತಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಾಹನ ಸವಾರರ ಹಿತದೃಷ್ಟಿಯಿಂದ 112 ಸಿಬ್ಬಂದಿ ತೋರಿದ ಈ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಚರಣೆಯನ್ನು ಇಲಾಖೆ ಹಾಗೂ ಸಾರ್ವಜನಿಕರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…