ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವೀರದಿಪ್ಪಯ್ಯ ಆಯ್ಕೆ

ತಾಲೂಕಿನ ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆಯುವುದರ ಮೂಲಕ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ವೀರದಿಪ್ಪಯ್ಯ.

ಚುನಾವಣಾಧಿಕಾರಿ ಮಾಧವರೆಡ್ಡಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ಸದಸ್ಯರ ಪೈಕಿ 9 ಮಂದಿ ಸದಸ್ಯರು ‌ವೀರದಿಪ್ಪಯ್ಯ ಅವರಿಗೆ ಮತ ಹಾಕುವುದರ‌ ಮೂಲಕ ಗೆಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೀರದಿಪ್ಪಯ್ಯ ಹಾಗೂ ರಾಮಕೃಷ್ಣಪ್ಪ ಅವರು ಉಮೇದುವಾರಿಕೆ ಸಲ್ಲಿಸಿದ್ದರು‌ ಇವರಲ್ಲಿ ವೀರದಿಪ್ಪಯ್ಯ ಹೆಚ್ಚು ಬಹುಮತ ಪಡೆದು ಅಧ್ಯಕ್ಷ ಪಟ್ಟ ಗಿಟ್ಟಿಸಿಕೊಂಡಿದ್ದು, ರಾಮಕೃಷ್ಣಪ್ಪನವರಿಗೆ ಕೇವಲ 2 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.

ಭರ್ಜರಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ವೀರದಿಪ್ಪಯ್ಯ ಅವರಿಗೆ ಸಂಘದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಅಭಿನಂದನೆ ಸಲ್ಲಿಸಿದರು.

ನಂತರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ನೂತನ ಅಧ್ಯಕ್ಷ ವೀರದಿಪ್ಪಯ್ಯ ಮಾತನಾಡಿ, ನನಗೆ ಮತ ನೀಡಿ ಗೆಲ್ಲಿಸಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಸಂಘದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ. ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಆದ್ದರಿಂದ ಕೂಡಲೇ ಜಾಗ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನಿಸುವೆ ಎಂದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago