ತಾಲೂಕಿನ ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆಯುವುದರ ಮೂಲಕ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ವೀರದಿಪ್ಪಯ್ಯ.
ಚುನಾವಣಾಧಿಕಾರಿ ಮಾಧವರೆಡ್ಡಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ಸದಸ್ಯರ ಪೈಕಿ 9 ಮಂದಿ ಸದಸ್ಯರು ವೀರದಿಪ್ಪಯ್ಯ ಅವರಿಗೆ ಮತ ಹಾಕುವುದರ ಮೂಲಕ ಗೆಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೀರದಿಪ್ಪಯ್ಯ ಹಾಗೂ ರಾಮಕೃಷ್ಣಪ್ಪ ಅವರು ಉಮೇದುವಾರಿಕೆ ಸಲ್ಲಿಸಿದ್ದರು ಇವರಲ್ಲಿ ವೀರದಿಪ್ಪಯ್ಯ ಹೆಚ್ಚು ಬಹುಮತ ಪಡೆದು ಅಧ್ಯಕ್ಷ ಪಟ್ಟ ಗಿಟ್ಟಿಸಿಕೊಂಡಿದ್ದು, ರಾಮಕೃಷ್ಣಪ್ಪನವರಿಗೆ ಕೇವಲ 2 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.
ಭರ್ಜರಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ವೀರದಿಪ್ಪಯ್ಯ ಅವರಿಗೆ ಸಂಘದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಅಭಿನಂದನೆ ಸಲ್ಲಿಸಿದರು.
ನಂತರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ನೂತನ ಅಧ್ಯಕ್ಷ ವೀರದಿಪ್ಪಯ್ಯ ಮಾತನಾಡಿ, ನನಗೆ ಮತ ನೀಡಿ ಗೆಲ್ಲಿಸಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಸಂಘದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ. ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಆದ್ದರಿಂದ ಕೂಡಲೇ ಜಾಗ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನಿಸುವೆ ಎಂದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…