ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವೀರದಿಪ್ಪಯ್ಯ ಆಯ್ಕೆ

ತಾಲೂಕಿನ ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆಯುವುದರ ಮೂಲಕ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ವೀರದಿಪ್ಪಯ್ಯ.

ಚುನಾವಣಾಧಿಕಾರಿ ಮಾಧವರೆಡ್ಡಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ಸದಸ್ಯರ ಪೈಕಿ 9 ಮಂದಿ ಸದಸ್ಯರು ‌ವೀರದಿಪ್ಪಯ್ಯ ಅವರಿಗೆ ಮತ ಹಾಕುವುದರ‌ ಮೂಲಕ ಗೆಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೀರದಿಪ್ಪಯ್ಯ ಹಾಗೂ ರಾಮಕೃಷ್ಣಪ್ಪ ಅವರು ಉಮೇದುವಾರಿಕೆ ಸಲ್ಲಿಸಿದ್ದರು‌ ಇವರಲ್ಲಿ ವೀರದಿಪ್ಪಯ್ಯ ಹೆಚ್ಚು ಬಹುಮತ ಪಡೆದು ಅಧ್ಯಕ್ಷ ಪಟ್ಟ ಗಿಟ್ಟಿಸಿಕೊಂಡಿದ್ದು, ರಾಮಕೃಷ್ಣಪ್ಪನವರಿಗೆ ಕೇವಲ 2 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.

ಭರ್ಜರಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ವೀರದಿಪ್ಪಯ್ಯ ಅವರಿಗೆ ಸಂಘದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಅಭಿನಂದನೆ ಸಲ್ಲಿಸಿದರು.

ನಂತರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ನೂತನ ಅಧ್ಯಕ್ಷ ವೀರದಿಪ್ಪಯ್ಯ ಮಾತನಾಡಿ, ನನಗೆ ಮತ ನೀಡಿ ಗೆಲ್ಲಿಸಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಸಂಘದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ. ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಆದ್ದರಿಂದ ಕೂಡಲೇ ಜಾಗ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನಿಸುವೆ ಎಂದರು.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

2 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

5 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

20 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

24 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago