ತಾಲೂಕಿನ ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆಯುವುದರ ಮೂಲಕ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ವೀರದಿಪ್ಪಯ್ಯ.
ಚುನಾವಣಾಧಿಕಾರಿ ಮಾಧವರೆಡ್ಡಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ಸದಸ್ಯರ ಪೈಕಿ 9 ಮಂದಿ ಸದಸ್ಯರು ವೀರದಿಪ್ಪಯ್ಯ ಅವರಿಗೆ ಮತ ಹಾಕುವುದರ ಮೂಲಕ ಗೆಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೀರದಿಪ್ಪಯ್ಯ ಹಾಗೂ ರಾಮಕೃಷ್ಣಪ್ಪ ಅವರು ಉಮೇದುವಾರಿಕೆ ಸಲ್ಲಿಸಿದ್ದರು ಇವರಲ್ಲಿ ವೀರದಿಪ್ಪಯ್ಯ ಹೆಚ್ಚು ಬಹುಮತ ಪಡೆದು ಅಧ್ಯಕ್ಷ ಪಟ್ಟ ಗಿಟ್ಟಿಸಿಕೊಂಡಿದ್ದು, ರಾಮಕೃಷ್ಣಪ್ಪನವರಿಗೆ ಕೇವಲ 2 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.
ಭರ್ಜರಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ವೀರದಿಪ್ಪಯ್ಯ ಅವರಿಗೆ ಸಂಘದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಅಭಿನಂದನೆ ಸಲ್ಲಿಸಿದರು.
ನಂತರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ನೂತನ ಅಧ್ಯಕ್ಷ ವೀರದಿಪ್ಪಯ್ಯ ಮಾತನಾಡಿ, ನನಗೆ ಮತ ನೀಡಿ ಗೆಲ್ಲಿಸಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಸಂಘದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ. ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಆದ್ದರಿಂದ ಕೂಡಲೇ ಜಾಗ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನಿಸುವೆ ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…