ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕ್ರೀಡೋತ್ಸವ- ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ

ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು.

ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್  ಜೂನಿಯರ್ ವಿಭಾಗದಲ್ಲಿ ಮಾನಸ ಎಸ್. ಆರ್, ಯು.ಲಿಖಿತ್ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದರು.

ಅಥ್ಲೆಟಿಕ್ಸ್ ಸೀನಿಯರ್ ವಿಭಾಗದಲ್ಲಿ ಟಿ.ನೀತು ಹಾಗೂ ಯಶವಂತ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಗುಂಪು ಸ್ಪರ್ಧೆಯಲ್ಲಿ ಪರ್ಲ್ ತಂಡ ಸಮಗ್ರ ಚಾಂಪಿಯನ್ ಪ್ರಶಸ್ತಿ ಸ್ವೀಕರಿಸಿದರೆ, ಸಫೈರ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.

ಇದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು 4×100 ರಿಲೇ ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಡಿ.2ರಂದು ಮಂಗಳೂರಿನ ಪುತ್ತೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲೂ ಶಾಲೆಯ ವಿದ್ಯಾರ್ಥಿಯೊಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ  ಶಾಲೆಯ ಕಾರ್ಯದರ್ಶಿ ಕೆ.ಜಿ. ಶ್ರೀನಿವಾಸ್ ಮೂರ್ತಿ ಅವರು, ಕ್ರೀಡೋತ್ಸವದ ಸಾಕಷ್ಟು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿ ಪದಕ ಪಡೆದಿದ್ದಾರೆ. ಪ್ರತಿಯೊಬ್ಬರು ಮಾನಸಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆಯಲ್ಲಿ ಆಸಕ್ತಿ ಇರಬೇಕು. ಜೊತೆಗೆ ಭಾಗವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯಿನಿ ಶೋಭಾ, ದೈಹಿಕ ಶಿಕ್ಷಕ ವಿನೋದ್ ರಾಜ್, ಮೀನಾಕ್ಷಿ , ನವೀನ್ ಕುಮಾರ್ ಮತ್ತು ಲೋಕೇಶ್ ಭಾಗವಹಿಸಿದ್ದರು.

Ramesh Babu

Journalist

Recent Posts

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

3 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

10 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

23 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

24 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

1 day ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

1 day ago