ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕ್ರೀಡೋತ್ಸವ- ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ

ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು.

ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್  ಜೂನಿಯರ್ ವಿಭಾಗದಲ್ಲಿ ಮಾನಸ ಎಸ್. ಆರ್, ಯು.ಲಿಖಿತ್ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದರು.

ಅಥ್ಲೆಟಿಕ್ಸ್ ಸೀನಿಯರ್ ವಿಭಾಗದಲ್ಲಿ ಟಿ.ನೀತು ಹಾಗೂ ಯಶವಂತ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಗುಂಪು ಸ್ಪರ್ಧೆಯಲ್ಲಿ ಪರ್ಲ್ ತಂಡ ಸಮಗ್ರ ಚಾಂಪಿಯನ್ ಪ್ರಶಸ್ತಿ ಸ್ವೀಕರಿಸಿದರೆ, ಸಫೈರ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.

ಇದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು 4×100 ರಿಲೇ ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಡಿ.2ರಂದು ಮಂಗಳೂರಿನ ಪುತ್ತೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲೂ ಶಾಲೆಯ ವಿದ್ಯಾರ್ಥಿಯೊಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ  ಶಾಲೆಯ ಕಾರ್ಯದರ್ಶಿ ಕೆ.ಜಿ. ಶ್ರೀನಿವಾಸ್ ಮೂರ್ತಿ ಅವರು, ಕ್ರೀಡೋತ್ಸವದ ಸಾಕಷ್ಟು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿ ಪದಕ ಪಡೆದಿದ್ದಾರೆ. ಪ್ರತಿಯೊಬ್ಬರು ಮಾನಸಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆಯಲ್ಲಿ ಆಸಕ್ತಿ ಇರಬೇಕು. ಜೊತೆಗೆ ಭಾಗವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯಿನಿ ಶೋಭಾ, ದೈಹಿಕ ಶಿಕ್ಷಕ ವಿನೋದ್ ರಾಜ್, ಮೀನಾಕ್ಷಿ , ನವೀನ್ ಕುಮಾರ್ ಮತ್ತು ಲೋಕೇಶ್ ಭಾಗವಹಿಸಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

12 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

12 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

13 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

14 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

17 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

17 hours ago