ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕ್ರೀಡೋತ್ಸವ- ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ

ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು.

ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್  ಜೂನಿಯರ್ ವಿಭಾಗದಲ್ಲಿ ಮಾನಸ ಎಸ್. ಆರ್, ಯು.ಲಿಖಿತ್ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದರು.

ಅಥ್ಲೆಟಿಕ್ಸ್ ಸೀನಿಯರ್ ವಿಭಾಗದಲ್ಲಿ ಟಿ.ನೀತು ಹಾಗೂ ಯಶವಂತ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಗುಂಪು ಸ್ಪರ್ಧೆಯಲ್ಲಿ ಪರ್ಲ್ ತಂಡ ಸಮಗ್ರ ಚಾಂಪಿಯನ್ ಪ್ರಶಸ್ತಿ ಸ್ವೀಕರಿಸಿದರೆ, ಸಫೈರ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.

ಇದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು 4×100 ರಿಲೇ ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಡಿ.2ರಂದು ಮಂಗಳೂರಿನ ಪುತ್ತೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲೂ ಶಾಲೆಯ ವಿದ್ಯಾರ್ಥಿಯೊಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ  ಶಾಲೆಯ ಕಾರ್ಯದರ್ಶಿ ಕೆ.ಜಿ. ಶ್ರೀನಿವಾಸ್ ಮೂರ್ತಿ ಅವರು, ಕ್ರೀಡೋತ್ಸವದ ಸಾಕಷ್ಟು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿ ಪದಕ ಪಡೆದಿದ್ದಾರೆ. ಪ್ರತಿಯೊಬ್ಬರು ಮಾನಸಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆಯಲ್ಲಿ ಆಸಕ್ತಿ ಇರಬೇಕು. ಜೊತೆಗೆ ಭಾಗವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯಿನಿ ಶೋಭಾ, ದೈಹಿಕ ಶಿಕ್ಷಕ ವಿನೋದ್ ರಾಜ್, ಮೀನಾಕ್ಷಿ , ನವೀನ್ ಕುಮಾರ್ ಮತ್ತು ಲೋಕೇಶ್ ಭಾಗವಹಿಸಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

15 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

19 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago