ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ ಮೂರ್ತಿ ತಿಳಿಸಿದರು.

ಭಾನುವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, 2006ರಲ್ಲಿ ಸಾಧನ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆ ಆರಂಭ ಮಾಡಲಾಯಿತು. ಸದ್ಯ 1 ರಿಂದ 10ನೇ ತರಗತಿವರೆಗೆ 1,041 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 18 ವರ್ಷಗಳಿಂದ ನಮ್ಮ ಶಾಲೆ ಗ್ರಾಮೀಣ, ನಗರ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಪ್ರತಿ ವರ್ಷ 100% ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಇದೆ ವೇಳೆ ಜೂನಿಯರ್ ಪುನೀತ್ ರಾಜ್ ಕುಮಾರ್ ಎಂದೆ ಹೆಸರು ವಾಸಿಯಾಗಿರುವ ಸಕಲೇಷಪುರದ ಅಪ್ಪು ಮಾತನಾಡಿ,  ಡಾ.ಪುನೀತ್ ರಾಜ್ ಕುಮಾರ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಜೀವನದಲ್ಲಿ ಪ್ರತಿಯೊಬ್ಬರು ಅವರಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರನ್ನು ಅನಾಥಾಶ್ರಮಕ್ಕೆ ಕಳುಹಿಸಬೇಡಿ, ಶಿಕ್ಷಣದ ಜೊತೆ ಮಾನವೀಯ ಗುಣಗಳು, ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯದ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಸತೀಶ್ ಕುಮಾರ್ ಮಾತನಾಡಿ, ನೂರು ದೇವಸ್ಥಾನ ನಿರ್ಮಾಣ ಮಾಡುವ ಬದಲು ಒಂದು ಶಾಲೆ ನಿರ್ಮಾಣ ಮಾಡಿ ಎಂಬ ನಾಣ್ಣುಡಿಯಂತೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಾಲೆ ನಿರ್ಮಾಣ ಮಾಡಿದ್ದಾರೆ ಎಂದರು.

ಮಕ್ಕಳನ್ನು ಕ್ರೀಯಾಶೀಲ, ಚಿಂತನಶೀಲರನ್ನಾಗಿ ಮಾಡುವಲ್ಲಿ ಶ್ರೀನಿವಾಸ್ ಮೂರ್ತಿಯವರು ಶ್ರಮಿಸುತ್ತಿದ್ದಾರೆ. ಭಾಷೆ ಕಲಿಯಲು ಸುಂದರವಾದ ವಾತಾವರಣ ಬೇಕು. ಅದು ಈ ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದು ಗುಣಗಾನ ಮಾಡಿದರು.

ವೇದಿಕೆ ಕಾರ್ಯಕ್ರಮ ಮುಗಿದ ನಂತರ ಪಡುವಣದಲಿ ಸೂರ್ಯರಶ್ಮಿ ಇಳೆಯ ಗರ್ಭ ಸೇರಿದಂತೆ, ಇಲ್ಲಿ ಲಿಟ್ಲ್ ಮಾಸ್ಟಾರುಗಳ ಕಲರವ ಮೈದೆಳೆದು, ಸಂಭ್ರಮ ಗರಿಬಿಚ್ಚಿತು. ಬಣ್ಣದೋಕುಳಿ ಚೆಲ್ಲುವ ದೀಪದ ಬೆಳಕಲ್ಲಿ ಮುದ್ದು ಮಕ್ಕಳ ನರ್ತನ ಪೋಷಕ-ಸಭಿಕರ ಮೈ ನವಿರೇಳಿಸಿತು.

‘ಸಂಕಲ್ಪ’ ತೊಟ್ಟು ಅಖಾಡಕ್ಕಿಳಿದ ಚಿಣ್ಣರು ತಮ್ಮಲ್ಲಿನ ಪ್ರತಿಭೆಯನ್ನು ನೃತ್ಯ ಮಾಡುವುದರ ಮೂಲಕ  ವೇದಿಕೆಯಲ್ಲಿ ಓರೆಗಚ್ಚಿದರು. ಕಾಂತಾರ, ಭಜರಂಗಿ, ಕಾಂಚನಾ ಸಿನಿಮಾದ ನೃತ್ಯಕ್ಕೆ ಪೋಷಕರು ಫಿಧಾ ಆದರು. ಬೊಂಬೆ ಹೇಳುತೈತೆ ನೃತ್ಯಕ್ಕೆ ಮೊಬೈಲ್ ನಲ್ಲಿ  ಟಾರ್ಚ್ ಹಾಕುವ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಗ್ರಾಮದ ಗಣ್ಯರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

6 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

10 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

13 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

14 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago