ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ ಮೂರ್ತಿ ತಿಳಿಸಿದರು.

ಭಾನುವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, 2006ರಲ್ಲಿ ಸಾಧನ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆ ಆರಂಭ ಮಾಡಲಾಯಿತು. ಸದ್ಯ 1 ರಿಂದ 10ನೇ ತರಗತಿವರೆಗೆ 1,041 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 18 ವರ್ಷಗಳಿಂದ ನಮ್ಮ ಶಾಲೆ ಗ್ರಾಮೀಣ, ನಗರ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಪ್ರತಿ ವರ್ಷ 100% ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಇದೆ ವೇಳೆ ಜೂನಿಯರ್ ಪುನೀತ್ ರಾಜ್ ಕುಮಾರ್ ಎಂದೆ ಹೆಸರು ವಾಸಿಯಾಗಿರುವ ಸಕಲೇಷಪುರದ ಅಪ್ಪು ಮಾತನಾಡಿ,  ಡಾ.ಪುನೀತ್ ರಾಜ್ ಕುಮಾರ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಜೀವನದಲ್ಲಿ ಪ್ರತಿಯೊಬ್ಬರು ಅವರಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರನ್ನು ಅನಾಥಾಶ್ರಮಕ್ಕೆ ಕಳುಹಿಸಬೇಡಿ, ಶಿಕ್ಷಣದ ಜೊತೆ ಮಾನವೀಯ ಗುಣಗಳು, ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯದ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಸತೀಶ್ ಕುಮಾರ್ ಮಾತನಾಡಿ, ನೂರು ದೇವಸ್ಥಾನ ನಿರ್ಮಾಣ ಮಾಡುವ ಬದಲು ಒಂದು ಶಾಲೆ ನಿರ್ಮಾಣ ಮಾಡಿ ಎಂಬ ನಾಣ್ಣುಡಿಯಂತೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಾಲೆ ನಿರ್ಮಾಣ ಮಾಡಿದ್ದಾರೆ ಎಂದರು.

ಮಕ್ಕಳನ್ನು ಕ್ರೀಯಾಶೀಲ, ಚಿಂತನಶೀಲರನ್ನಾಗಿ ಮಾಡುವಲ್ಲಿ ಶ್ರೀನಿವಾಸ್ ಮೂರ್ತಿಯವರು ಶ್ರಮಿಸುತ್ತಿದ್ದಾರೆ. ಭಾಷೆ ಕಲಿಯಲು ಸುಂದರವಾದ ವಾತಾವರಣ ಬೇಕು. ಅದು ಈ ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದು ಗುಣಗಾನ ಮಾಡಿದರು.

ವೇದಿಕೆ ಕಾರ್ಯಕ್ರಮ ಮುಗಿದ ನಂತರ ಪಡುವಣದಲಿ ಸೂರ್ಯರಶ್ಮಿ ಇಳೆಯ ಗರ್ಭ ಸೇರಿದಂತೆ, ಇಲ್ಲಿ ಲಿಟ್ಲ್ ಮಾಸ್ಟಾರುಗಳ ಕಲರವ ಮೈದೆಳೆದು, ಸಂಭ್ರಮ ಗರಿಬಿಚ್ಚಿತು. ಬಣ್ಣದೋಕುಳಿ ಚೆಲ್ಲುವ ದೀಪದ ಬೆಳಕಲ್ಲಿ ಮುದ್ದು ಮಕ್ಕಳ ನರ್ತನ ಪೋಷಕ-ಸಭಿಕರ ಮೈ ನವಿರೇಳಿಸಿತು.

‘ಸಂಕಲ್ಪ’ ತೊಟ್ಟು ಅಖಾಡಕ್ಕಿಳಿದ ಚಿಣ್ಣರು ತಮ್ಮಲ್ಲಿನ ಪ್ರತಿಭೆಯನ್ನು ನೃತ್ಯ ಮಾಡುವುದರ ಮೂಲಕ  ವೇದಿಕೆಯಲ್ಲಿ ಓರೆಗಚ್ಚಿದರು. ಕಾಂತಾರ, ಭಜರಂಗಿ, ಕಾಂಚನಾ ಸಿನಿಮಾದ ನೃತ್ಯಕ್ಕೆ ಪೋಷಕರು ಫಿಧಾ ಆದರು. ಬೊಂಬೆ ಹೇಳುತೈತೆ ನೃತ್ಯಕ್ಕೆ ಮೊಬೈಲ್ ನಲ್ಲಿ  ಟಾರ್ಚ್ ಹಾಕುವ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಗ್ರಾಮದ ಗಣ್ಯರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

2 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

4 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

5 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

11 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

11 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

15 hours ago