ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ ಮೂರ್ತಿ ತಿಳಿಸಿದರು.

ಭಾನುವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, 2006ರಲ್ಲಿ ಸಾಧನ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆ ಆರಂಭ ಮಾಡಲಾಯಿತು. ಸದ್ಯ 1 ರಿಂದ 10ನೇ ತರಗತಿವರೆಗೆ 1,041 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 18 ವರ್ಷಗಳಿಂದ ನಮ್ಮ ಶಾಲೆ ಗ್ರಾಮೀಣ, ನಗರ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಪ್ರತಿ ವರ್ಷ 100% ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಇದೆ ವೇಳೆ ಜೂನಿಯರ್ ಪುನೀತ್ ರಾಜ್ ಕುಮಾರ್ ಎಂದೆ ಹೆಸರು ವಾಸಿಯಾಗಿರುವ ಸಕಲೇಷಪುರದ ಅಪ್ಪು ಮಾತನಾಡಿ,  ಡಾ.ಪುನೀತ್ ರಾಜ್ ಕುಮಾರ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಜೀವನದಲ್ಲಿ ಪ್ರತಿಯೊಬ್ಬರು ಅವರಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರನ್ನು ಅನಾಥಾಶ್ರಮಕ್ಕೆ ಕಳುಹಿಸಬೇಡಿ, ಶಿಕ್ಷಣದ ಜೊತೆ ಮಾನವೀಯ ಗುಣಗಳು, ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯದ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಸತೀಶ್ ಕುಮಾರ್ ಮಾತನಾಡಿ, ನೂರು ದೇವಸ್ಥಾನ ನಿರ್ಮಾಣ ಮಾಡುವ ಬದಲು ಒಂದು ಶಾಲೆ ನಿರ್ಮಾಣ ಮಾಡಿ ಎಂಬ ನಾಣ್ಣುಡಿಯಂತೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಾಲೆ ನಿರ್ಮಾಣ ಮಾಡಿದ್ದಾರೆ ಎಂದರು.

ಮಕ್ಕಳನ್ನು ಕ್ರೀಯಾಶೀಲ, ಚಿಂತನಶೀಲರನ್ನಾಗಿ ಮಾಡುವಲ್ಲಿ ಶ್ರೀನಿವಾಸ್ ಮೂರ್ತಿಯವರು ಶ್ರಮಿಸುತ್ತಿದ್ದಾರೆ. ಭಾಷೆ ಕಲಿಯಲು ಸುಂದರವಾದ ವಾತಾವರಣ ಬೇಕು. ಅದು ಈ ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದು ಗುಣಗಾನ ಮಾಡಿದರು.

ವೇದಿಕೆ ಕಾರ್ಯಕ್ರಮ ಮುಗಿದ ನಂತರ ಪಡುವಣದಲಿ ಸೂರ್ಯರಶ್ಮಿ ಇಳೆಯ ಗರ್ಭ ಸೇರಿದಂತೆ, ಇಲ್ಲಿ ಲಿಟ್ಲ್ ಮಾಸ್ಟಾರುಗಳ ಕಲರವ ಮೈದೆಳೆದು, ಸಂಭ್ರಮ ಗರಿಬಿಚ್ಚಿತು. ಬಣ್ಣದೋಕುಳಿ ಚೆಲ್ಲುವ ದೀಪದ ಬೆಳಕಲ್ಲಿ ಮುದ್ದು ಮಕ್ಕಳ ನರ್ತನ ಪೋಷಕ-ಸಭಿಕರ ಮೈ ನವಿರೇಳಿಸಿತು.

‘ಸಂಕಲ್ಪ’ ತೊಟ್ಟು ಅಖಾಡಕ್ಕಿಳಿದ ಚಿಣ್ಣರು ತಮ್ಮಲ್ಲಿನ ಪ್ರತಿಭೆಯನ್ನು ನೃತ್ಯ ಮಾಡುವುದರ ಮೂಲಕ  ವೇದಿಕೆಯಲ್ಲಿ ಓರೆಗಚ್ಚಿದರು. ಕಾಂತಾರ, ಭಜರಂಗಿ, ಕಾಂಚನಾ ಸಿನಿಮಾದ ನೃತ್ಯಕ್ಕೆ ಪೋಷಕರು ಫಿಧಾ ಆದರು. ಬೊಂಬೆ ಹೇಳುತೈತೆ ನೃತ್ಯಕ್ಕೆ ಮೊಬೈಲ್ ನಲ್ಲಿ  ಟಾರ್ಚ್ ಹಾಕುವ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಗ್ರಾಮದ ಗಣ್ಯರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago