ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ ಮೂರ್ತಿ ತಿಳಿಸಿದರು.

ಭಾನುವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, 2006ರಲ್ಲಿ ಸಾಧನ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆ ಆರಂಭ ಮಾಡಲಾಯಿತು. ಸದ್ಯ 1 ರಿಂದ 10ನೇ ತರಗತಿವರೆಗೆ 1,041 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 18 ವರ್ಷಗಳಿಂದ ನಮ್ಮ ಶಾಲೆ ಗ್ರಾಮೀಣ, ನಗರ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಪ್ರತಿ ವರ್ಷ 100% ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಇದೆ ವೇಳೆ ಜೂನಿಯರ್ ಪುನೀತ್ ರಾಜ್ ಕುಮಾರ್ ಎಂದೆ ಹೆಸರು ವಾಸಿಯಾಗಿರುವ ಸಕಲೇಷಪುರದ ಅಪ್ಪು ಮಾತನಾಡಿ,  ಡಾ.ಪುನೀತ್ ರಾಜ್ ಕುಮಾರ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಜೀವನದಲ್ಲಿ ಪ್ರತಿಯೊಬ್ಬರು ಅವರಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರನ್ನು ಅನಾಥಾಶ್ರಮಕ್ಕೆ ಕಳುಹಿಸಬೇಡಿ, ಶಿಕ್ಷಣದ ಜೊತೆ ಮಾನವೀಯ ಗುಣಗಳು, ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯದ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಸತೀಶ್ ಕುಮಾರ್ ಮಾತನಾಡಿ, ನೂರು ದೇವಸ್ಥಾನ ನಿರ್ಮಾಣ ಮಾಡುವ ಬದಲು ಒಂದು ಶಾಲೆ ನಿರ್ಮಾಣ ಮಾಡಿ ಎಂಬ ನಾಣ್ಣುಡಿಯಂತೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಾಲೆ ನಿರ್ಮಾಣ ಮಾಡಿದ್ದಾರೆ ಎಂದರು.

ಮಕ್ಕಳನ್ನು ಕ್ರೀಯಾಶೀಲ, ಚಿಂತನಶೀಲರನ್ನಾಗಿ ಮಾಡುವಲ್ಲಿ ಶ್ರೀನಿವಾಸ್ ಮೂರ್ತಿಯವರು ಶ್ರಮಿಸುತ್ತಿದ್ದಾರೆ. ಭಾಷೆ ಕಲಿಯಲು ಸುಂದರವಾದ ವಾತಾವರಣ ಬೇಕು. ಅದು ಈ ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದು ಗುಣಗಾನ ಮಾಡಿದರು.

ವೇದಿಕೆ ಕಾರ್ಯಕ್ರಮ ಮುಗಿದ ನಂತರ ಪಡುವಣದಲಿ ಸೂರ್ಯರಶ್ಮಿ ಇಳೆಯ ಗರ್ಭ ಸೇರಿದಂತೆ, ಇಲ್ಲಿ ಲಿಟ್ಲ್ ಮಾಸ್ಟಾರುಗಳ ಕಲರವ ಮೈದೆಳೆದು, ಸಂಭ್ರಮ ಗರಿಬಿಚ್ಚಿತು. ಬಣ್ಣದೋಕುಳಿ ಚೆಲ್ಲುವ ದೀಪದ ಬೆಳಕಲ್ಲಿ ಮುದ್ದು ಮಕ್ಕಳ ನರ್ತನ ಪೋಷಕ-ಸಭಿಕರ ಮೈ ನವಿರೇಳಿಸಿತು.

‘ಸಂಕಲ್ಪ’ ತೊಟ್ಟು ಅಖಾಡಕ್ಕಿಳಿದ ಚಿಣ್ಣರು ತಮ್ಮಲ್ಲಿನ ಪ್ರತಿಭೆಯನ್ನು ನೃತ್ಯ ಮಾಡುವುದರ ಮೂಲಕ  ವೇದಿಕೆಯಲ್ಲಿ ಓರೆಗಚ್ಚಿದರು. ಕಾಂತಾರ, ಭಜರಂಗಿ, ಕಾಂಚನಾ ಸಿನಿಮಾದ ನೃತ್ಯಕ್ಕೆ ಪೋಷಕರು ಫಿಧಾ ಆದರು. ಬೊಂಬೆ ಹೇಳುತೈತೆ ನೃತ್ಯಕ್ಕೆ ಮೊಬೈಲ್ ನಲ್ಲಿ  ಟಾರ್ಚ್ ಹಾಕುವ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಗ್ರಾಮದ ಗಣ್ಯರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

7 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

8 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

11 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

18 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

21 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago