ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ ಮೂರ್ತಿ ತಿಳಿಸಿದರು.

ಭಾನುವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, 2006ರಲ್ಲಿ ಸಾಧನ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆ ಆರಂಭ ಮಾಡಲಾಯಿತು. ಸದ್ಯ 1 ರಿಂದ 10ನೇ ತರಗತಿವರೆಗೆ 1,041 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 18 ವರ್ಷಗಳಿಂದ ನಮ್ಮ ಶಾಲೆ ಗ್ರಾಮೀಣ, ನಗರ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಪ್ರತಿ ವರ್ಷ 100% ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಇದೆ ವೇಳೆ ಜೂನಿಯರ್ ಪುನೀತ್ ರಾಜ್ ಕುಮಾರ್ ಎಂದೆ ಹೆಸರು ವಾಸಿಯಾಗಿರುವ ಸಕಲೇಷಪುರದ ಅಪ್ಪು ಮಾತನಾಡಿ,  ಡಾ.ಪುನೀತ್ ರಾಜ್ ಕುಮಾರ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಜೀವನದಲ್ಲಿ ಪ್ರತಿಯೊಬ್ಬರು ಅವರಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರನ್ನು ಅನಾಥಾಶ್ರಮಕ್ಕೆ ಕಳುಹಿಸಬೇಡಿ, ಶಿಕ್ಷಣದ ಜೊತೆ ಮಾನವೀಯ ಗುಣಗಳು, ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯದ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಸತೀಶ್ ಕುಮಾರ್ ಮಾತನಾಡಿ, ನೂರು ದೇವಸ್ಥಾನ ನಿರ್ಮಾಣ ಮಾಡುವ ಬದಲು ಒಂದು ಶಾಲೆ ನಿರ್ಮಾಣ ಮಾಡಿ ಎಂಬ ನಾಣ್ಣುಡಿಯಂತೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಾಲೆ ನಿರ್ಮಾಣ ಮಾಡಿದ್ದಾರೆ ಎಂದರು.

ಮಕ್ಕಳನ್ನು ಕ್ರೀಯಾಶೀಲ, ಚಿಂತನಶೀಲರನ್ನಾಗಿ ಮಾಡುವಲ್ಲಿ ಶ್ರೀನಿವಾಸ್ ಮೂರ್ತಿಯವರು ಶ್ರಮಿಸುತ್ತಿದ್ದಾರೆ. ಭಾಷೆ ಕಲಿಯಲು ಸುಂದರವಾದ ವಾತಾವರಣ ಬೇಕು. ಅದು ಈ ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದು ಗುಣಗಾನ ಮಾಡಿದರು.

ವೇದಿಕೆ ಕಾರ್ಯಕ್ರಮ ಮುಗಿದ ನಂತರ ಪಡುವಣದಲಿ ಸೂರ್ಯರಶ್ಮಿ ಇಳೆಯ ಗರ್ಭ ಸೇರಿದಂತೆ, ಇಲ್ಲಿ ಲಿಟ್ಲ್ ಮಾಸ್ಟಾರುಗಳ ಕಲರವ ಮೈದೆಳೆದು, ಸಂಭ್ರಮ ಗರಿಬಿಚ್ಚಿತು. ಬಣ್ಣದೋಕುಳಿ ಚೆಲ್ಲುವ ದೀಪದ ಬೆಳಕಲ್ಲಿ ಮುದ್ದು ಮಕ್ಕಳ ನರ್ತನ ಪೋಷಕ-ಸಭಿಕರ ಮೈ ನವಿರೇಳಿಸಿತು.

‘ಸಂಕಲ್ಪ’ ತೊಟ್ಟು ಅಖಾಡಕ್ಕಿಳಿದ ಚಿಣ್ಣರು ತಮ್ಮಲ್ಲಿನ ಪ್ರತಿಭೆಯನ್ನು ನೃತ್ಯ ಮಾಡುವುದರ ಮೂಲಕ  ವೇದಿಕೆಯಲ್ಲಿ ಓರೆಗಚ್ಚಿದರು. ಕಾಂತಾರ, ಭಜರಂಗಿ, ಕಾಂಚನಾ ಸಿನಿಮಾದ ನೃತ್ಯಕ್ಕೆ ಪೋಷಕರು ಫಿಧಾ ಆದರು. ಬೊಂಬೆ ಹೇಳುತೈತೆ ನೃತ್ಯಕ್ಕೆ ಮೊಬೈಲ್ ನಲ್ಲಿ  ಟಾರ್ಚ್ ಹಾಕುವ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಗ್ರಾಮದ ಗಣ್ಯರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

Ramesh Babu

Journalist

Recent Posts

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

2 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

20 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

23 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

2 days ago