ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ ಮೂರ್ತಿ ತಿಳಿಸಿದರು.

ಭಾನುವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, 2006ರಲ್ಲಿ ಸಾಧನ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆ ಆರಂಭ ಮಾಡಲಾಯಿತು. ಸದ್ಯ 1 ರಿಂದ 10ನೇ ತರಗತಿವರೆಗೆ 1,041 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 18 ವರ್ಷಗಳಿಂದ ನಮ್ಮ ಶಾಲೆ ಗ್ರಾಮೀಣ, ನಗರ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಪ್ರತಿ ವರ್ಷ 100% ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಇದೆ ವೇಳೆ ಜೂನಿಯರ್ ಪುನೀತ್ ರಾಜ್ ಕುಮಾರ್ ಎಂದೆ ಹೆಸರು ವಾಸಿಯಾಗಿರುವ ಸಕಲೇಷಪುರದ ಅಪ್ಪು ಮಾತನಾಡಿ,  ಡಾ.ಪುನೀತ್ ರಾಜ್ ಕುಮಾರ್ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಜೀವನದಲ್ಲಿ ಪ್ರತಿಯೊಬ್ಬರು ಅವರಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಪೋಷಕರನ್ನು ಅನಾಥಾಶ್ರಮಕ್ಕೆ ಕಳುಹಿಸಬೇಡಿ, ಶಿಕ್ಷಣದ ಜೊತೆ ಮಾನವೀಯ ಗುಣಗಳು, ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯದ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಸತೀಶ್ ಕುಮಾರ್ ಮಾತನಾಡಿ, ನೂರು ದೇವಸ್ಥಾನ ನಿರ್ಮಾಣ ಮಾಡುವ ಬದಲು ಒಂದು ಶಾಲೆ ನಿರ್ಮಾಣ ಮಾಡಿ ಎಂಬ ನಾಣ್ಣುಡಿಯಂತೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಾಲೆ ನಿರ್ಮಾಣ ಮಾಡಿದ್ದಾರೆ ಎಂದರು.

ಮಕ್ಕಳನ್ನು ಕ್ರೀಯಾಶೀಲ, ಚಿಂತನಶೀಲರನ್ನಾಗಿ ಮಾಡುವಲ್ಲಿ ಶ್ರೀನಿವಾಸ್ ಮೂರ್ತಿಯವರು ಶ್ರಮಿಸುತ್ತಿದ್ದಾರೆ. ಭಾಷೆ ಕಲಿಯಲು ಸುಂದರವಾದ ವಾತಾವರಣ ಬೇಕು. ಅದು ಈ ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದು ಗುಣಗಾನ ಮಾಡಿದರು.

ವೇದಿಕೆ ಕಾರ್ಯಕ್ರಮ ಮುಗಿದ ನಂತರ ಪಡುವಣದಲಿ ಸೂರ್ಯರಶ್ಮಿ ಇಳೆಯ ಗರ್ಭ ಸೇರಿದಂತೆ, ಇಲ್ಲಿ ಲಿಟ್ಲ್ ಮಾಸ್ಟಾರುಗಳ ಕಲರವ ಮೈದೆಳೆದು, ಸಂಭ್ರಮ ಗರಿಬಿಚ್ಚಿತು. ಬಣ್ಣದೋಕುಳಿ ಚೆಲ್ಲುವ ದೀಪದ ಬೆಳಕಲ್ಲಿ ಮುದ್ದು ಮಕ್ಕಳ ನರ್ತನ ಪೋಷಕ-ಸಭಿಕರ ಮೈ ನವಿರೇಳಿಸಿತು.

‘ಸಂಕಲ್ಪ’ ತೊಟ್ಟು ಅಖಾಡಕ್ಕಿಳಿದ ಚಿಣ್ಣರು ತಮ್ಮಲ್ಲಿನ ಪ್ರತಿಭೆಯನ್ನು ನೃತ್ಯ ಮಾಡುವುದರ ಮೂಲಕ  ವೇದಿಕೆಯಲ್ಲಿ ಓರೆಗಚ್ಚಿದರು. ಕಾಂತಾರ, ಭಜರಂಗಿ, ಕಾಂಚನಾ ಸಿನಿಮಾದ ನೃತ್ಯಕ್ಕೆ ಪೋಷಕರು ಫಿಧಾ ಆದರು. ಬೊಂಬೆ ಹೇಳುತೈತೆ ನೃತ್ಯಕ್ಕೆ ಮೊಬೈಲ್ ನಲ್ಲಿ  ಟಾರ್ಚ್ ಹಾಕುವ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಗ್ರಾಮದ ಗಣ್ಯರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

10 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

11 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago