Categories: Home

ಲಿಟ್ಲ್ ಮಾಸ್ಟರ್ ಶಾಲೆಯಲ್ಲಿ ಮೂನ್ ಲೈಟ್ ಡಿನ್ನರ್ ಕಾರ್ಯಕ್ರಮ: ಬೆಳದಿಂಗಳಲ್ಲಿ ಅಮ್ಮನ ಕೈ ತುತ್ತು ಸವಿದು ಸಂಭ್ರಮಿಸಿದ ಪುಟಾಣಿಗಳು

ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ‌ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.

ಮಕ್ಕಳು-ಪೋಷಕರಿಗಾಗಿ ಏರ್ಪಡಿಸಿದ್ದ ಬೆಳದಿಂಗಳ ಕೈ ತುತ್ತು ಭೋಜನಾ ಕಾರ್ಯಕ್ರಮವು ಶಾಲೆಯಲ್ಲಿ ಸಂಭ್ರಮದ ಭಾವಲೋಕ‌ವನ್ನೇ ತೆರೆದಿಟ್ಟಿತು. ಸದಾ ಸಂಸಾರ, ವೃತ್ತಿಯ ಒತ್ತಡದಲ್ಲೇ ಕಳೆಯುವ ಪೋಷಕರು, ತಮ್ಮ ಮಕ್ಕಳೊಂದಿಗೆ ಆಡಿ ನಲಿದರು.

ಪೋಷಕರಿಗಾಗಿ ವರ್ಣರಂಜಿತ ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಪೋಷಕರು ಭಾಗವಹಿಸಿದ್ದರು. ಖಾದ್ಯ ತಯಾರಿಕೆ ಸ್ಪರ್ಧೆಯಲ್ಲಿ ಸುಮಾರು 100ಕ್ಕೂ ಅಧಿಕ ಪೋಷಕರು ಭಾಗವಹಿಸಿ ವಿಧ ವಿಧವಾದ ರುಚಿಕರ, ಆರೋಗ್ಯಕರ ತಿಂಡಿ ತಿನಿಸು ತಯಾರಿಸಿದರು.

ಅಜ್ಜ-ಅಜ್ಜಿಯೊಂದಿಗೆ ಮಕ್ಕಳ ರ‌್ಯಾಂಪ್

ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ‌್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.

ತಾಯಿ ತನ್ನ ಮಗು ಊಟ ಮಾಡಲು ಹಠ ಮಾಡಿದಾಗ ಬೆಳದಿಂಗಳಲ್ಲಿ ಚಂದಮಾಮನನ್ನು ತೋರಿಸಿ ಊಟ ಮಾಡಿಸುತ್ತಾಳೆ. ಅದರ ನೆನಪಿಗಾಗಿ ಇಂದು ನಮ್ಮ ಶಾಲೆಯಲ್ಲಿ ಕೈ ತುತ್ತು ಭೋಜನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಇದರಿಂದ ತಾಯಿ ಮತ್ತು ಮಗುವಿನ ನಡುವಿನ ಸಂಬಂಧ ಮತ್ತಷ್ಟು ಆಪ್ಯಾಯಮಾನವಾಗಲಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸಮೂರ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೋಷಕರು, ಪುಟಾಣಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದರು.

ಲಿಟ್ಲ್‌ ಮಾಸ್ಟರ್‌ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ  ಪೋಷಕಿ ರಜನಿ ಹೇಳಿದರು.

ಅಡುಗೆ ತಯಾರಿಕೆ ಸ್ಪರ್ಧೆಯಲ್ಲಿ ಹಣ್ಣು-ಹಂಪಲು, ತರಕಾರಿ, ಕಾಳುಗಳನ್ನು ಬಳಸಿ ಪೌಷ್ಟಿಕಾಂಶಯುಕ್ತ, ಆರೋಗ್ಯಕರವಾದ ತಿಂಡಿ ತಿನಿಸುಗಳನ್ನು ಮಾಡಲಾಗಿತ್ತು.

ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.

ಶಾಲೆ ಎಂದರೆ ಕೇವಲ ಪಠ್ಯ ಪುಸ್ತಕದಲ್ಲಿರುವ ವಿಷಯ ಅರಿತು ಒಳ್ಳೆ ಅಂಕ ಪಡೆದು ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗುವಂತೆ ಮಾಡುವುದಲ್ಲ, ಬದಲಿಗೆ ಪಠ್ಯದ ಜೊತೆ ಜೊತೆಯಲ್ಲಿ ಸಾಂಸ್ಕೃತಿಕ, ನೈತಿಕ, ಕ್ರೀಡಾ ಮನೋಭಾವ, ಮಾನವೀಯ ಮೌಲ್ಯ, ಕಲೆ, ಸಾಹಿತ್ಯ, ದೇಶ ಭಕ್ತಿ, ಸಂಬಂಧಗಳಿಗೆ ಬೆಲೆ ಕೊಡುವುದು ಸೇರಿದಂತೆ ಇತರೆ ಪಠ್ಯೇತರ ಚಟುವಟಿಕೆಗಳನ್ನು ಸಹ ಮಗುವಿಗೆ ಹೇಳಿಕೊಡುವುದು ಶಾಲೆಯ ಉದ್ದೇಶವಾಗಿರಬೇಕು. ಆಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆಯಿಂದ ಪರಿಪಕ್ವವಾಗಿ, ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಶಾಲೆಯ ಕೋ ಆರ್ಡಿನೇಟರ್ ನಾಗರಾಣಿ ಅವರು ತಿಳಿಸಿದರು.

ರಂಗೋಲಿ ಸ್ಪರ್ಧೆ, ಖಾದ್ಯ ತಯಾರಿಕೆ ಸ್ಪರ್ಧೆ, ನೃತ್ಯ ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ತಮ್ಮ ಕಲೆಯನ್ನು ಪ್ರಚುರಪಡಿಸಿದವರಿಗೆ ಪ್ರಶಸ್ತಿ ನೀಡಿ ಹುರಿದುಂಬಿಸಲಾಯಿತು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

49 minutes ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

5 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

9 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago