Categories: Home

ಲಿಟ್ಲ್ ಮಾಸ್ಟರ್ ಶಾಲೆಯಲ್ಲಿ ಮೂನ್ ಲೈಟ್ ಡಿನ್ನರ್ ಕಾರ್ಯಕ್ರಮ: ಬೆಳದಿಂಗಳಲ್ಲಿ ಅಮ್ಮನ ಕೈ ತುತ್ತು ಸವಿದು ಸಂಭ್ರಮಿಸಿದ ಪುಟಾಣಿಗಳು

ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ‌ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.

ಮಕ್ಕಳು-ಪೋಷಕರಿಗಾಗಿ ಏರ್ಪಡಿಸಿದ್ದ ಬೆಳದಿಂಗಳ ಕೈ ತುತ್ತು ಭೋಜನಾ ಕಾರ್ಯಕ್ರಮವು ಶಾಲೆಯಲ್ಲಿ ಸಂಭ್ರಮದ ಭಾವಲೋಕ‌ವನ್ನೇ ತೆರೆದಿಟ್ಟಿತು. ಸದಾ ಸಂಸಾರ, ವೃತ್ತಿಯ ಒತ್ತಡದಲ್ಲೇ ಕಳೆಯುವ ಪೋಷಕರು, ತಮ್ಮ ಮಕ್ಕಳೊಂದಿಗೆ ಆಡಿ ನಲಿದರು.

ಪೋಷಕರಿಗಾಗಿ ವರ್ಣರಂಜಿತ ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಪೋಷಕರು ಭಾಗವಹಿಸಿದ್ದರು. ಖಾದ್ಯ ತಯಾರಿಕೆ ಸ್ಪರ್ಧೆಯಲ್ಲಿ ಸುಮಾರು 100ಕ್ಕೂ ಅಧಿಕ ಪೋಷಕರು ಭಾಗವಹಿಸಿ ವಿಧ ವಿಧವಾದ ರುಚಿಕರ, ಆರೋಗ್ಯಕರ ತಿಂಡಿ ತಿನಿಸು ತಯಾರಿಸಿದರು.

ಅಜ್ಜ-ಅಜ್ಜಿಯೊಂದಿಗೆ ಮಕ್ಕಳ ರ‌್ಯಾಂಪ್

ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ‌್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.

ತಾಯಿ ತನ್ನ ಮಗು ಊಟ ಮಾಡಲು ಹಠ ಮಾಡಿದಾಗ ಬೆಳದಿಂಗಳಲ್ಲಿ ಚಂದಮಾಮನನ್ನು ತೋರಿಸಿ ಊಟ ಮಾಡಿಸುತ್ತಾಳೆ. ಅದರ ನೆನಪಿಗಾಗಿ ಇಂದು ನಮ್ಮ ಶಾಲೆಯಲ್ಲಿ ಕೈ ತುತ್ತು ಭೋಜನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಇದರಿಂದ ತಾಯಿ ಮತ್ತು ಮಗುವಿನ ನಡುವಿನ ಸಂಬಂಧ ಮತ್ತಷ್ಟು ಆಪ್ಯಾಯಮಾನವಾಗಲಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸಮೂರ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೋಷಕರು, ಪುಟಾಣಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದರು.

ಲಿಟ್ಲ್‌ ಮಾಸ್ಟರ್‌ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ  ಪೋಷಕಿ ರಜನಿ ಹೇಳಿದರು.

ಅಡುಗೆ ತಯಾರಿಕೆ ಸ್ಪರ್ಧೆಯಲ್ಲಿ ಹಣ್ಣು-ಹಂಪಲು, ತರಕಾರಿ, ಕಾಳುಗಳನ್ನು ಬಳಸಿ ಪೌಷ್ಟಿಕಾಂಶಯುಕ್ತ, ಆರೋಗ್ಯಕರವಾದ ತಿಂಡಿ ತಿನಿಸುಗಳನ್ನು ಮಾಡಲಾಗಿತ್ತು.

ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.

ಶಾಲೆ ಎಂದರೆ ಕೇವಲ ಪಠ್ಯ ಪುಸ್ತಕದಲ್ಲಿರುವ ವಿಷಯ ಅರಿತು ಒಳ್ಳೆ ಅಂಕ ಪಡೆದು ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗುವಂತೆ ಮಾಡುವುದಲ್ಲ, ಬದಲಿಗೆ ಪಠ್ಯದ ಜೊತೆ ಜೊತೆಯಲ್ಲಿ ಸಾಂಸ್ಕೃತಿಕ, ನೈತಿಕ, ಕ್ರೀಡಾ ಮನೋಭಾವ, ಮಾನವೀಯ ಮೌಲ್ಯ, ಕಲೆ, ಸಾಹಿತ್ಯ, ದೇಶ ಭಕ್ತಿ, ಸಂಬಂಧಗಳಿಗೆ ಬೆಲೆ ಕೊಡುವುದು ಸೇರಿದಂತೆ ಇತರೆ ಪಠ್ಯೇತರ ಚಟುವಟಿಕೆಗಳನ್ನು ಸಹ ಮಗುವಿಗೆ ಹೇಳಿಕೊಡುವುದು ಶಾಲೆಯ ಉದ್ದೇಶವಾಗಿರಬೇಕು. ಆಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆಯಿಂದ ಪರಿಪಕ್ವವಾಗಿ, ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಶಾಲೆಯ ಕೋ ಆರ್ಡಿನೇಟರ್ ನಾಗರಾಣಿ ಅವರು ತಿಳಿಸಿದರು.

ರಂಗೋಲಿ ಸ್ಪರ್ಧೆ, ಖಾದ್ಯ ತಯಾರಿಕೆ ಸ್ಪರ್ಧೆ, ನೃತ್ಯ ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ತಮ್ಮ ಕಲೆಯನ್ನು ಪ್ರಚುರಪಡಿಸಿದವರಿಗೆ ಪ್ರಶಸ್ತಿ ನೀಡಿ ಹುರಿದುಂಬಿಸಲಾಯಿತು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

4 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

5 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

10 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

12 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

14 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

16 hours ago