ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.
ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.
ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕಿ ರಜನಿ ಹೇಳಿದರು.
ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…