Categories: Home

ಲಿಟ್ಲ್ ಮಾಸ್ಟರ್ ಶಾಲೆಯಲ್ಲಿ ಮೂನ್ ಲೈಟ್ ಡಿನ್ನರ್ ಕಾರ್ಯಕ್ರಮ: ಬೆಳದಿಂಗಳಲ್ಲಿ ಅಮ್ಮನ ಕೈ ತುತ್ತು ಸವಿದು ಸಂಭ್ರಮಿಸಿದ ಪುಟಾಣಿಗಳು

ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ‌ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.

ಮಕ್ಕಳು-ಪೋಷಕರಿಗಾಗಿ ಏರ್ಪಡಿಸಿದ್ದ ಬೆಳದಿಂಗಳ ಕೈ ತುತ್ತು ಭೋಜನಾ ಕಾರ್ಯಕ್ರಮವು ಶಾಲೆಯಲ್ಲಿ ಸಂಭ್ರಮದ ಭಾವಲೋಕ‌ವನ್ನೇ ತೆರೆದಿಟ್ಟಿತು. ಸದಾ ಸಂಸಾರ, ವೃತ್ತಿಯ ಒತ್ತಡದಲ್ಲೇ ಕಳೆಯುವ ಪೋಷಕರು, ತಮ್ಮ ಮಕ್ಕಳೊಂದಿಗೆ ಆಡಿ ನಲಿದರು.

ಪೋಷಕರಿಗಾಗಿ ವರ್ಣರಂಜಿತ ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಪೋಷಕರು ಭಾಗವಹಿಸಿದ್ದರು. ಖಾದ್ಯ ತಯಾರಿಕೆ ಸ್ಪರ್ಧೆಯಲ್ಲಿ ಸುಮಾರು 100ಕ್ಕೂ ಅಧಿಕ ಪೋಷಕರು ಭಾಗವಹಿಸಿ ವಿಧ ವಿಧವಾದ ರುಚಿಕರ, ಆರೋಗ್ಯಕರ ತಿಂಡಿ ತಿನಿಸು ತಯಾರಿಸಿದರು.

ಅಜ್ಜ-ಅಜ್ಜಿಯೊಂದಿಗೆ ಮಕ್ಕಳ ರ‌್ಯಾಂಪ್

ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ‌್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.

ತಾಯಿ ತನ್ನ ಮಗು ಊಟ ಮಾಡಲು ಹಠ ಮಾಡಿದಾಗ ಬೆಳದಿಂಗಳಲ್ಲಿ ಚಂದಮಾಮನನ್ನು ತೋರಿಸಿ ಊಟ ಮಾಡಿಸುತ್ತಾಳೆ. ಅದರ ನೆನಪಿಗಾಗಿ ಇಂದು ನಮ್ಮ ಶಾಲೆಯಲ್ಲಿ ಕೈ ತುತ್ತು ಭೋಜನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಇದರಿಂದ ತಾಯಿ ಮತ್ತು ಮಗುವಿನ ನಡುವಿನ ಸಂಬಂಧ ಮತ್ತಷ್ಟು ಆಪ್ಯಾಯಮಾನವಾಗಲಿದೆ ಎಂದು ಶಾಲೆಯ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸಮೂರ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೋಷಕರು, ಪುಟಾಣಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದರು.

ಲಿಟ್ಲ್‌ ಮಾಸ್ಟರ್‌ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ  ಪೋಷಕಿ ರಜನಿ ಹೇಳಿದರು.

ಅಡುಗೆ ತಯಾರಿಕೆ ಸ್ಪರ್ಧೆಯಲ್ಲಿ ಹಣ್ಣು-ಹಂಪಲು, ತರಕಾರಿ, ಕಾಳುಗಳನ್ನು ಬಳಸಿ ಪೌಷ್ಟಿಕಾಂಶಯುಕ್ತ, ಆರೋಗ್ಯಕರವಾದ ತಿಂಡಿ ತಿನಿಸುಗಳನ್ನು ಮಾಡಲಾಗಿತ್ತು.

ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.

ಶಾಲೆ ಎಂದರೆ ಕೇವಲ ಪಠ್ಯ ಪುಸ್ತಕದಲ್ಲಿರುವ ವಿಷಯ ಅರಿತು ಒಳ್ಳೆ ಅಂಕ ಪಡೆದು ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗುವಂತೆ ಮಾಡುವುದಲ್ಲ, ಬದಲಿಗೆ ಪಠ್ಯದ ಜೊತೆ ಜೊತೆಯಲ್ಲಿ ಸಾಂಸ್ಕೃತಿಕ, ನೈತಿಕ, ಕ್ರೀಡಾ ಮನೋಭಾವ, ಮಾನವೀಯ ಮೌಲ್ಯ, ಕಲೆ, ಸಾಹಿತ್ಯ, ದೇಶ ಭಕ್ತಿ, ಸಂಬಂಧಗಳಿಗೆ ಬೆಲೆ ಕೊಡುವುದು ಸೇರಿದಂತೆ ಇತರೆ ಪಠ್ಯೇತರ ಚಟುವಟಿಕೆಗಳನ್ನು ಸಹ ಮಗುವಿಗೆ ಹೇಳಿಕೊಡುವುದು ಶಾಲೆಯ ಉದ್ದೇಶವಾಗಿರಬೇಕು. ಆಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆಯಿಂದ ಪರಿಪಕ್ವವಾಗಿ, ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಶಾಲೆಯ ಕೋ ಆರ್ಡಿನೇಟರ್ ನಾಗರಾಣಿ ಅವರು ತಿಳಿಸಿದರು.

ರಂಗೋಲಿ ಸ್ಪರ್ಧೆ, ಖಾದ್ಯ ತಯಾರಿಕೆ ಸ್ಪರ್ಧೆ, ನೃತ್ಯ ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ತಮ್ಮ ಕಲೆಯನ್ನು ಪ್ರಚುರಪಡಿಸಿದವರಿಗೆ ಪ್ರಶಸ್ತಿ ನೀಡಿ ಹುರಿದುಂಬಿಸಲಾಯಿತು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago