ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.
ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.
ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕಿ ರಜನಿ ಹೇಳಿದರು.
ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…