ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.
ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.
ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕಿ ರಜನಿ ಹೇಳಿದರು.
ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…