ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು… ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ ಮೆರೆದ ತಾಯಂದಿರು… ಈ ಸುಂದರ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಬೆಳದಿಂಗಳ ಕೈತುತ್ತು ಭೋಜನ’ ಕಾರ್ಯಕ್ರಮ.
ಮೊಮ್ಮಕ್ಕಳೊಂದಿಗೆ ಅಜ್ಜ-ಅಜ್ಜಿಯರ ರ್ಯಾಂಪ್ ವಾಕ್, ನೃತ್ಯ ಬಹಳ ಅಚ್ಚುಕಟ್ಟಾಗಿ ನೆರವೇರಿತು. ನಂತರ ವಿದ್ಯಾರ್ಥಿಗಳು ತಂದೆ-ತಾಯಿಯೊಂದಿಗೆ ನೃತ್ಯ ಪ್ರದರ್ಶನ ನೀಡಿದರು.
ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ರಂಗೋಲಿ ಸ್ಪರ್ಧೆ, ಮೂನ್ ಲೈಟ್ ಡಿನ್ನರ್, ಕಪಲ್ ಡ್ಯಾನ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿ, ಪೋಷಕರು ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಿರುವುದು ಸಂತಸದ ಸಂಗತಿ, ಪೋಷಕರಾದ ನಾವೂ ಸಹ ಉತ್ಸಾಹದಿಂದ ಎಲ್ಲಾ ಕಾರ್ಯಕ್ರಮಗಲ್ಲಿ ಭಾಗವಹಿಸಿ ನಮ್ಮ ಪ್ರತಿಭೆ ಹೊರಹಾಕಿದ್ದೇವೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕಿ ರಜನಿ ಹೇಳಿದರು.
ಇತ್ತೀಚಿಗೆ ಎಲ್ಲರೂ ಜಂಕ್ ಫುಢ್ ಗೆ ಮಾರುಹೋಗಿ ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಉತ್ತಮ ಆರೋಗ್ಯ ಜೀವನ ನಡೆಸಲು ತಾಜಾ ಹಣ್ಣು-ಹಂಪಲು, ತರಕಾರಿ, ಮೊಳಕೆ ಕಾಳುಗಳ ಪಾತ್ರ ಬಹಳ ಮುಖ್ಯ ಎಂಬ ಸಂದೇಶ ಈ ಕಾರ್ಯಕ್ರಮ ನಮಗೆ ಮನವರಿಕೆ ಮಾಡಿಕೊಟ್ಟಿತು ಎಂದು ಮಮತಾ ಚಂದ್ರಶೇಖರ್ ಹೇಳಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…