ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ಜೂನ್ 27ರ ರಾತ್ರಿ ಕ್ಯಾಪ್ಸಿಕಂ ಬೆಳೆ ಸಾಗಾಟ ಮುಗಿಸಿ, ತೋಟದ ಕಾರ್ಮಿಕರಿಗೆ ಊಟ ತೆಗೆದುಕೊಂಡು ಬೊಲೆರೋ ಪಿಕ್‌ಅಪ್ ವಾಹನದಲ್ಲಿ ತೋಟದತ್ತ ತೆರಳುತ್ತಿದ್ದ ವೇಳೆ ಹೊನ್ನಾಘಟ್ಟ ಗ್ರಾಮದ ನರಸಿಂಹಮೂರ್ತಿ ಮನೆ ಸಮೀಪದ ಮಣ್ಣಿನ ರಸ್ತೆಯಲ್ಲಿ ಆರೋಪಿಯು ವಾಹನ ಅಡ್ಡಗಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುದಾರರು ಸುಮಾರು ಒಂದೂವರೆ ವರ್ಷಗಳಿಂದ ಹೊನ್ನಾಘಟ್ಟ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 6.5 ಎಕರೆ ಜಮೀನನ್ನು ಮೂರು ವರ್ಷಗಳ ಲೀಸ್‌ಗೆ ಪಡೆದು ಕ್ಯಾಪ್ಸಿಕಂ ಬೆಳೆ ಬೆಳೆಯುತ್ತಿದ್ದರು. ಜಮೀನಿನ ಮಾಲೀಕ ಹಾಗೂ ಆರೋಪಿ ನರಸಿಂಹಮೂರ್ತಿ ನಡುವೆ ಹಿಂದಿನಿಂದಲೂ ವೈಮನಸ್ಸು ಇದ್ದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ವಾಹನ ನಿಲ್ಲಿಸಿದ ಬಳಿಕ “ನೀನು ಯಾರು, ಇಲ್ಲಿ ಏಕೆ ಬಂದಿದ್ದೀಯ?” ಎಂದು ಪ್ರಶ್ನಿಸಿದ ಆರೋಪಿ, ಜಮೀನು ಲೀಸ್‌ಗೆ ಪಡೆದಿರುವ ವಿಚಾರ ತಿಳಿದ ತಕ್ಷಣ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪಿಸ್ತೂಲ್‌ನಿಂದ ಬಾಯಿಗೆ ಹೊಡೆದ ಪರಿಣಾಮ ದೂರುದಾರರ ಒಂದು ಹಲ್ಲು ಕಿತ್ತು ಬಿದ್ದಿದೆ ಎಂದು ಆರೋಪಿಸಲಾಗಿದೆ.

ನಂತರ ಆರೋಪಿ ಪಿಸ್ತೂಲ್ ಲೋಡ್ ಮಾಡಲು ಮುಂದಾದಾಗ ದೂರುದಾರರು ವಾಹನ ಚಲಾಯಿಸಿಕೊಂಡು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿ ಗಾಳಿಯಲ್ಲಿ ಹಾಗೂ ವಾಹನ ತೆರಳುತ್ತಿದ್ದ ದಿಕ್ಕಿನಲ್ಲಿ ಸುಮಾರು 7ರಿಂದ 8 ಸುತ್ತು ಗುಂಡು ಹಾರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮುಂದೆ ವಾಹನ ನಿಲ್ಲಿಸಿದಾಗಲೂ ಮತ್ತೊಮ್ಮೆ ಗುಂಡು ಹಾರಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.

ಘಟನೆಯ ತಕ್ಷಣ ರಾತ್ರಿ 10.27 ಗಂಟೆಗೆ ದೂರುದಾರರು ತುರ್ತು ಸೇವೆ 112ಕ್ಕೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಳಿಕ ಆರೋಪಿಯ ಬಳಿಯಿದ್ದ ಪಿಸ್ತೂಲ್ ವಶಪಡಿಸಿಕೊಂಡು ಠಾಣೆಗೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಸ್ಥಳದಲ್ಲಿ ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡುವುದು, ಪಿಸ್ತೂಲ್‌ನಿಂದ ಹಲ್ಲೆ ನಡೆಸುವುದು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಗಳಡಿ ಹೊನ್ನಾಘಟ್ಟ ಗ್ರಾಮದ ನರಸಿಂಹಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

22 hours ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

1 day ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago