ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡೋಣ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ, ಚುನಾವಣೆ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆಯು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆಗೆ ಯಾವುದೇ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಬಹುದು. ಆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಪೂರ್ವ ಸಿದ್ಧತೆಗಳನ್ನು ಇಂದಿನಿಂದಲೆ ಮಾಡಿಕೊಳ್ಳಬೇಕು ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವ ತಯಾರಿ ಕಾರ್ಯಗಳನ್ನು ಚಾಚುತಪ್ಪದೆ ಜಿಲ್ಲೆಯಲ್ಲಿ ಪ್ರಾರಂಭ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿಗಳ ನಿಯೋಜನೆ, ಎಲ್ಲಾ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಭದ್ರತೆ, ಪೊಲೀಸ್ ಬಂದೋಬಸ್ತ್, ಚೆಕ್ ಪೋಸ್ಟ್ ನಿರ್ಮಾಣ, ಚುನಾವಣಾ ಲಿಪಿಕ ಪರಿಕರಗಳು ಹಾಗೂ ಇತರ ವಸ್ತುಗಳ ಖರೀದಿ, ಸಾರಿಗೆ ವ್ಯವಸ್ಥೆ, 24*7 ಕಂಟ್ರೋಲ್ ರೂಂ ತೆರೆಯಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರಿಗೆ ಒಂದು ಸುತ್ತಿನ ತರಬೇತಿ ಸೇರಿದಂತೆ ಇನ್ನಿತರ ಸಕಲ ತಯಾರಿಗಳನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಚುನಾವಣಾ ಕರ್ತವ್ಯಕ್ಕಾಗಿ 21 ವಿಷಯಗಳಿಗೆ 21 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯೋಗದ ಪ್ರಸ್ತುತದ ನಿರ್ದೇಶನಗಳನ್ವಯ ಕರಾರುವಕ್ಕಾಗಿ ಕಾರ್ಯನಿರ್ವಹಿಸಬೇಕು. ಮಾದರಿ ನೀತಿ ಸಂಹಿತೆಯ ಅಧಿಸೂಚನೆ ಪ್ರಕಟದ ದಿನಾಂಕದಿಂದ ಚುನಾವಣೆ ಫಲಿತಾಂಶದ ನಂತರವೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಅನುಮತಿ ಇಲ್ಲದೆ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭಗಳು ಏರ್ಪಡದಂತೆ ನೋಡಿಕೊಳ್ಳಬೇಕು. ಅನಿವಾರ್ಯತೆ ಎಂಬ ಕಾರ್ಯಕ್ರಮಗಳಿಗೆ ಪೊಲೀಸ್ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿರಬೇಕು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಜಾಹೀರಾತು ಪ್ರಕಟಿಸಲು ಸರಕಾರಿ ಮತ್ತು ಅನುದಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ ನಿಗಾವಹಿಸಬೇಕು ಎಂದು ಹೇಳಿದರು.

ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಸರ್ಕಾದ ಅಧೀನದಲ್ಲಿರುವ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ರೀತಿಯ ಪ್ರಚಾರ ಫಲಕಗಳಲ್ಲಿನ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಚುನಾವಣಾ ಸಭೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಕ್ಷಮದ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕು. ಚುನಾವಣೆ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಿ, ಒಟ್ಟಾಗಿ ಕೆಲಸ ಮಾಡೋಣ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

6 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

9 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

22 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago