ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರ: ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು- ಸಿಎಂ‌ ಸಿದ್ದರಾಮಯ್ಯ ಆಗ್ರಹ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದರು.

ಚುನಾವಣಾ ಆಯೋಗ ಸಂವಿಧಾನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ‌ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 16 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಗಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

7 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago