ಲೋಕಸಭಾ ಚುನಾವಣೆ- ಅಧಿಕಾರಿಗಳ ಸಮನ್ವಯತೆ, ಸಹಕಾರ ಅತ್ಯಗತ್ಯ- ಪಿ.ಎನ್ ರವೀಂದ್ರ

ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಕುರಿತ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 08 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಚಿಕ್ಕಬಳ್ಳಾಪುರ ಜಿಲ್ಲೆಯ 3 ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕು ಹಾಗೂ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಕ್ಷೇತ್ರ ಬರುತ್ತದೆ. ಈ 8 ಕ್ಷೇತ್ರಗಳಿಗೆ ಚಿಕ್ಕಬಳ್ಳಾಪುರ ಕೇಂದ್ರ ಸ್ಥಾನವಾಗಿದೆ. ಹೀಗಾಗಿ ಇಂದಿನ ಸಭೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕು ಹಾಗೂ ಯಲಹಂಕ ಕ್ಷೇತ್ರದ ಚುನಾವಣೆ ಅಧಿಕಾರಿಗಳ ಸಹಕಾರ ಸಭೆ ಇದಾಗಿದ್ದು. ಚುನಾವಣೆ ಯಶಸ್ವಿಯಾಗಿ ನಡೆಯಲು ನಿಮ್ಮೆಲ್ಲರ ಸಹಕಾರ ಅಗತ್ಯ, ಎಲ್ಲರು ಜೊತೆಯಾಗಿ ಕೆಲಸ ಮಾಡೋಣ ಎಂದರು.

ಚುನಾವಣೆಗೆ ಈಗಾಗಲೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳು ಪ್ರತಿಯೊಂದು ಮತಗಟ್ಟೆಯ ಸ್ಥಿತಿಗತಿ ಪರಿಶೀಲಿಸಿ, ಎಲ್ಲಾ ಮತಗಟ್ಟೆಗಳ ಮಾಹಿತಿ ಪಡೆದಿರಬೇಕು. ಮತದಾರರ ಪಟ್ಟಿ, ಮತಗಟ್ಟೆಗಳ ವಿವರ ಕರ್ತವ್ಯ ನಿರತ ಅಧಿಕಾರಿಗಳಿಗೆ ತಿಳಿದಿರಬೇಕು. ಎಂ.ಸಿ.ಸಿ, ಎಫ್.ಎಸ್.ಟಿ, ವಿ.ವಿ.ಟಿ ಟೀಮ್, ರಿಟರ್ನಿಂಗ್ ಆಫೀಸರ್ ಗಳಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಇ.ವಿ.ಎಂ ಮಿಷನ್ಗಳ ಭದ್ರತೆ, ಚೆಕ್ ಪೋಸ್ಟ್ ಗಳ ಪರಿಶೀಲನೆ, ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ. ಸಮರ್ಪಕವಾಗಿ, ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವುದರಿಂದ ಹೆಚ್ಚಿನ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯಲ್ಲಿ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದೇವೆ. ಅಧಿಕಾರಿಗಳಿಗೆ ವಿವಿಧ ಹಂತದಲ್ಲಿ ತರಬೇತಿ ನೀಡಲಾಗಿದೆ. ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಎಂದು ಮತ್ತೊಮ್ಮೆ ಅಧಿಕಾರಿಗಳಿಗೆ ಸೂಚಿಸಿದರು. ಯಾವ ಸಂದರ್ಭದಲ್ಲಿ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ನಾವೆಲ್ಲರೂ ಸನ್ನದ್ಧರಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಯ ಚುನಾವಣಾಧಿಕಾರಿಗಳು, ತಹಶೀಲ್ದಾರ್ ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಡಿವೈಎಸ್ಪಿ ಗಳು ಸೇರಿದಂತೆ ಇತರೆ ಚುನಾವಣೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

38 minutes ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

2 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

2 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

6 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

13 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

1 day ago