ಲೋಕಸಭಾ ಚುನಾವಣೆ: ಮತದಾರರಲ್ಲಿ ಆತ್ಮಸ್ಥೈರ್ಯ ತುಂಬಲು ಪೊಲೀಸರಿಂದ ರೂಟ್ ಮಾರ್ಚ್

ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ಜನತೆ ಮುಕ್ತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂಬ ಸಂದೇಶವನ್ನು ರೂಟ್ ಮಾರ್ಚ್ ಮಾಡುವ ಮೂಲಕ‌ ರವಾನಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ‌ ನಗರದ ಸೂಕ್ಷ್ಮ ಪ್ರದೇಶಗಳಾದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಿಂದ ಪ್ರಾರಂಭವಾಗಿ ಇಸ್ಲಾಂಪುರ, ಕಾಳಮ್ಮ ದೇವಸ್ಥಾನ, ಹಳೇಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಸ್ಥಾನ, ಅಯ್ಯಪ್ಪ‌ ದೇವಸ್ಥಾನ, ಡಿಕ್ರಾಸ್, ನಗರ‌ ಠಾಣಾ ವರೆಗೆ ರೂಟ್ ಮಾರ್ಚ್ ನಡೆಸಲಾಯಿತು.

ತಾಲೂಕಿನ ಮತದಾರರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು, ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಮತದಾನದ ದಿನದಂದು ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ಮತದಾನ ಕೇಂದ್ರಗಳಿಗೆ ಹೋಗಿ ತಮ್ಮ ಹಕ್ಕು ಚಲಾಯಿಸಲೆಂದು ರೂಟ್ ಮಾರ್ಚ್ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ‌ ಹೇಳಿದರು.

ಜಿಲ್ಲಾದ್ಯಂತ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು‌ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಎಎಸ್ ಪಿ (ಅಪರಾಧ ವಿಭಾಗ) ನಾಗರಾಜು, ಡಿವೈಎಸ್ ಪಿ, ಪಿ.ರವಿ, ನಗರ‌ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ, ಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ನವೀನ್ ಕುಮಾರ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

53 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago