ಲೋಕಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನದಂದು ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರಿಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ/ಬಿಯರ್/ವೈನ್ ತಯಾರಿಕಾ ಡಿಸ್ಟಿಲರಿ/ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago