2024ರ ಲೋಕಸಭೆ ಚುನಾವಣೆ ಸನಿಹ ಹಿನ್ನೆಲೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು.
ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಖಡಕ್ ಎಚ್ಚರಿಕೆ ನೀಡಿದರು.
ಪ್ರತಿಯೊಬ್ಬ ರೌಡಿಶೀಟರ್ ಗಳ ಚಲನವಲನಗಳ ಮೇಲೆ ಇಲಾಖೆ ಕಣ್ಣಿಟ್ಟಿರುತ್ತದೆ. ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ ಗೂಂಡಾ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೊಳಿಸಿ, ಗಡಿಪಾರು ಮಾಡುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.
ಚುನಾವಣಾ ದಿನದ ಆಸುಪಾಸು ಹಾಗೂ ಚುನಾವಣೆ ನಂತರ ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಪಾಲ್ಗೊಳ್ಳವ ಕುರಿತು ಇಲಾಖೆ ಗಮನಕ್ಕೆ ಬಂದರೆ ಕಾನೂನು ಕ್ರಮವನ್ನು ಮುಲಾಜಿಲ್ಲದೆ ಕೈಗೊಳ್ಳಲಾಗುವುದು ಎಂದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…