ಲೋಕಸಭಾ ಸಾರ್ವತ್ರಿಕ ಚುನಾವಣೆ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆಯ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರೀಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರೀಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಹಾಗೂ ಜೂನ್ 03 ರ ಮಧ್ಯರಾತ್ರಿ 12.00 ಗಂಟೆಯಿಂದ ಜೂನ್4.00ರ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ/ಬಿಯರ್/ವೈನ್ ತಯಾರಿಕಾ ಡಿಸ್ಟಿಲರಿ/ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಆದೇಶಿಸಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

6 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago