ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆಯ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರೀಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರೀಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಹಾಗೂ ಜೂನ್ 03 ರ ಮಧ್ಯರಾತ್ರಿ 12.00 ಗಂಟೆಯಿಂದ ಜೂನ್4.00ರ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ/ಬಿಯರ್/ವೈನ್ ತಯಾರಿಕಾ ಡಿಸ್ಟಿಲರಿ/ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಆದೇಶಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…