ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.
ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.
ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…