ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.
ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.
ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…