ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪ- ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು

ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.

ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.

ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

55 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago