ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪ- ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು

ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.

ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.

ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

12 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

16 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago