ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪ- ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು

ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.

ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.

ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

45 minutes ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

21 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago