ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.
ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.
ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…