ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪ- ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು

ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.

ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.

ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

59 minutes ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

16 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

20 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

21 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

23 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

23 hours ago