ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪ- ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು

ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ.ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.

ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.

ಇವತ್ತು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ದುಷ್ಕರ್ಮಿಗಳು ಜಿಗಿದು ಅವಾಂತರ ಸೃಷ್ಟಿಸಿದ ಘಟನೆ ನಿಜಕ್ಕೂ ಅತ್ಯಂತ ಆಶ್ಚರ್ಯಕರವಾದಂಥದ್ದು, ಆಘಾತಕಾರಿಯಾದಂಥದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಅವರು ಯಾರು, ಹೊಗೆ ಚಿಮ್ಮಿಸುವ ಕ್ಯಾನಿಸ್ಟರುಗಳನ್ನು ಹೊತ್ತು ಹೇಗೆ ಒಳ ಬಂದರು, ಅವರ ಉದ್ದೇಶವೇನು ಅನ್ನುವುದೆಲ್ಲದರ ಬಗ್ಗೆಯೂ ಶೀಘ್ರ ತನಿಖೆ – ತೀವ್ರ ತನಿಖೆ ಖಂಡಿತಾ ನಡೆದೇ ನಡೆಯುತ್ತದೆ, ಸತ್ಯ ಹೊರಬಂದೇ ಬರುತ್ತದೆ ಅನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ, ಶ್ರೀ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ಭಾರತ ಏರಿರುವ ಎತ್ತರ ಕಂಡು ಸಹಿಸಲಾರದ ಕೆಲವು ಆಂತರಿಕ ಶಕ್ತಿಗಳು ಎಂಥಾ ದೇಶವಿರೋಧೀ ಕೃತ್ಯಕ್ಕೂ ಮುಂದಾಗುತ್ತಾರಲ್ಲಾ ಅನ್ನುವುದು ನೋವಿನ ಸಂಗತಿ ಎಂದಿದ್ದಾರೆ.

ನಾಳೆ ನಾಡಿದ್ದರಲ್ಲಿ ಕೆಲವು ಮಹತ್ವದ ಮಸೂದೆಗಳು ಅಂಗೀಕಾರಗೊಳ್ಳಲಿವೆ; ಇಂಥಾ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇದರಲ್ಲಿ ಯಾರ್ಯಾರೆಲ್ಲರ ಕೈವಾಡವಿದೆ ಅನ್ನುವುದು ಬಯಲಾಗಬೇಕು, ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯಕ್ಕೆ, ಈ ಘಟನೆಯಿಂದ ಆಘಾತವಾಗಿದೆ ಅನ್ನುವುದನ್ನು ಬಿಟ್ಟರೆ, ಅದೃಷ್ಟವಶಾತ್ ಇನ್ನಾವುದೇ ಅನಾಹುತ ಆಗಿಲ್ಲ. ಹಾಗಾಗಿ, ತನಿಖೆಗೂ ಮುಂಚೆಯೇ ಯಾವುದೇ ಥರದ ವದಂತಿಗಳನ್ನಾಗಲೀ ತಪ್ಪು ಮಾಹಿತಿಗಳನ್ನಾಗಲೀ ಹರಡುವ ಮೂಲಕ ಶಾಂತಿ ಕದಡುವ ಯತ್ನ ಮಾಡಬಾರದು, ತನಿಖೆ ಮುಗಿಯಲಿ, ಸತ್ಯ ಹೊರಬರಲಿ ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

3 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

11 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago