ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.
ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದರು.
ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.
ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…