ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ- ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ‌ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ  ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.

ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ  ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ‌ ಎಂದರು.

ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.

ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

11 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

24 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago