ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.
ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದರು.
ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.
ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…