ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.
ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದರು.
ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.
ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…