ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ- ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ‌ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ  ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.

ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ  ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ‌ ಎಂದರು.

ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.

ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago