Categories: ಲೇಖನ

ಲೋಕಸಭೆ ಚುನಾವಣೆ ಘೋಷಣೆಯಾಗಿದೆ…… ನಮ್ಮ ನಡೆ ಯಾವ ರೀತಿ ಇರಬೇಕು..?

ಲೋಕಸಭಾ ಚುನಾವಣೆ ಘೋಷಣೆಯಾಗಿದೆ…….. ಮುಂದಿನ ಸುಮಾರು 75 ದಿನಗಳು ಸಾಕಷ್ಟು ಕುತೂಹಲ ಮತ್ತು ಸಂಘರ್ಷಮಯ ಸಾಮಾಜಿಕ ರಾಜಕೀಯ ವಾತಾವರಣ ನಿರ್ಮಾಣವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ವ್ಯಕ್ತಿಗಳಾದ ನಾವು ಹೆಚ್ಚು ಜವಾಬ್ದಾರಿಯಿಂದ, ತಾಳ್ಮೆಯಿಂದ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದು ವೈಯಕ್ತಿಕ ಹಾಗೂ ದೇಶದ ಹಿತಾಸಕ್ತಿಯಿಂದ ಬಹಳ ಮುಖ್ಯ…..

ರಾಜಕಾರಣಿಗಳು ಮತ್ತು ಮಾಧ್ಯಮಗಳು ತಮ್ಮ ಸ್ವಾರ್ಥ ಮತ್ತು ವ್ಯಾಪಾರದ ದೃಷ್ಟಿಯಿಂದ ಇಲ್ಲಸಲ್ಲದ ಆರೋಪಗಳನ್ನು, ದ್ವೇಷವನ್ನು, ಅಸೂಯೆಯನ್ನ ಬಹಿರಂಗವಾಗಿ ಪ್ರದರ್ಶಿಸುತ್ತಾ ಜನರನ್ನು ಪ್ರಚೋದಿಸಬಹುದು, ಉದ್ರೇಕಿಸಬಹುದು, ಆದರೆ, ನಾವುಗಳು ಆ ಮುಖವಾಡದ ಕಪಟವನ್ನು ನಿರ್ಲಕ್ಷಿಸಬೇಕು…..

ಚುನಾವಣೆ ಎಂಬುದು ಯುದ್ಧವು ಅಲ್ಲ, ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ. ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ. ಯಾರೋ ಒಬ್ಬರು ಗೆಲ್ಲುತ್ತಾರೆ ಮತ್ತೊಬ್ಬರು ಸೋಲುತ್ತಾರೆ. ಅದರಿಂದ ಅಂತಹ ದೊಡ್ಡ ವ್ಯತ್ಯಾಸವೇನು ಆಗುವುದಿಲ್ಲ…..

ಈ 75 ದಿನಗಳ ಒಂದು ಸ್ಪರ್ಧೆಗೆ ಅನಾವಶ್ಯಕವಾಗಿ ನಾವುಗಳು ಏಕೆ ಮನಸ್ತಾಪ ಮಾಡಿಕೊಳ್ಳಬೇಕು, ನಾವುಗಳು ಏಕೆ ಶತ್ರುಗಳಾಗಬೇಕು, ನಾವುಗಳು ಏಕೆ ಒಬ್ಬರಿಗೊಬ್ಬರು ನಿಂದಿಸಿಕೊಳ್ಳಬೇಕು……

ಸಮ ಚಿತ್ತದ ಸ್ಥಿತಪ್ರಜ್ಞತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಾ, ಸಂಬಂಧಗಳನ್ನು ಸಹಜವಾಗಿಯೇ ಕಾಪಾಡಿಕೊಳ್ಳಬಹುದಲ್ಲವೇ….

ಗೆಳೆತನದ ಘನತೆಯನ್ನು ಕಾಪಾಡೋಣ………

ಈ ಸಂದರ್ಭದಲ್ಲಿ ನಮ್ಮ ಜವಾಬ್ದಾರಿ ಏನು ?ಮುಖ್ಯವಾಗಿ ಸೋಷಿಯಲ್ ಮೀಡಿಯಗಳಲ್ಲಿ ಆಕ್ಟೀವ್ ಅಗಿರುವವರು…..ಮೊದಲಿಗೆ ಈ ಟಿವಿ ಮಾಧ್ಯಮಗಳ TRP  ಪ್ರೇರಿತ ವಿವೇಚನಾರಹಿತ ಪ್ರಚೋದಾತ್ಮಕ ಹೇಳಿಕೆಗಳನ್ನು ನಿರ್ಲಕ್ಷಿಸೋಣ…..

ಕುರುಕ್ಷೇತ್ರ – ಅಖಾಡ – ಯುದ್ಧ  ಮುಂತಾದ ಕೆರಳಿಸುವ ಕಾರ್ಯಕ್ರಮಗಳನ್ನು ಹಾಸ್ಯಾಸ್ಪದವಾಗಿ ನೋಡೋಣ…..

ಹೌದು, ಇದು ಪ್ರಜಾಪ್ರಭುತ್ವ ಮತ್ತು  ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯದ‌ ದೇಶ ನಿಜ.‌ ಹಾಗಂತ ಹುಚ್ಚುಚ್ಚಾಗಿ ಅವಶ್ಯಕತೆ ಇಲ್ಲದಿದ್ದರೂ ಚರ್ಚೆಯ ನೆಪದಲ್ಲಿ ಕೆಟ್ಟದಾಗಿ ಪ್ರತಿಕ್ರಿಯಿಸುವುದು ಬೇಡ….

ನಾವೆಲ್ಲರೂ ಸ್ನೇಹಿತರು. ಯಾವುದೋ ಒಂದು ಪಕ್ಷದ ಬಗ್ಗೆ ಒಲವಿರಬಹುದು. ಅದರ ಅರ್ಥ ನಾವು ಅದನ್ನು ದೊಡ್ಡ ಗಂಟಲಿನಲ್ಲಿ ಕೂಗಾಡಿ ಈಗಿರುವ ನಮ್ಮ ಪ್ರೀತಿ ವಿಶ್ವಾಸಕ್ಕೆ ಧಕ್ಕೆ ಮಾಡಿಕೊಳ್ಳುವುದು ಬೇಡ…..

ಈ ಪಕ್ಷ ಬಂದರೆ ಹಾಗೆ, ಆ ಪಕ್ಷ ಬಂದರೆ ಹೀಗೆ ,ಎಂದು ನಮ್ಮೊಳಗೆ ಕಚ್ಚಾಡುವುದು ಬೇಡ. ಅಂತಹ ಕ್ರಾಂತಿಕಾರಿ ಬದಲಾವಣೆ ಈ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ…..ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. ತುಂಬಾ ಸಂತೋಷ. ಆದರೆ ಸಭ್ಯತೆಯ ಗೆರೆ ದಾಟದೆ, ನಾವೇ ಸರಿ ಎಂದು ಹಠ ಮಾಡದೆ, ದುರಹಂಕಾರ ಪ್ರದರ್ಶಿಸದೆ ನಮ್ಮ ಅಭಿಪ್ರಾಯ ಒಪ್ಪಲೇ ಬೇಕು ಎಂದು ಒತ್ತಡ ಹೇರದೆ ನಗುನಗುತ್ತಾ ಪ್ರತಿಕ್ರಿಯಿಸಿ…..

ಸೋಷಿಯಲ್ ಮೀಡಿಯಾಗಳಲ್ಲಿ ಎಷ್ಟೋ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ, ಕೌಟುಂಬಿಕ , ಹಳೆಯ ಸ್ನೇಹಿತರ, ತಮ್ಮ ಊರಿನವರ‌, ಹೀಗೆ ನಾನಾ ಗುಂಪುಗಳಿವೆ. ಈ ಚುನಾವಣಾ ಸಮಯದಲ್ಲಿ ಕೇವಲ ಯಾರೋ ಸ್ವಾರ್ಥಿಗಳ ರಾಜಕೀಯ ದಾಳಗಳಾಗುವುದು ಬೇಡ…..

ಟಿವಿಗಳಲ್ಲಿ ಅಜನ್ಮ ಶತ್ರುಗಳಂತೆ ಜಗಳವಾಡುವ ನಾಯಕರು ಕಾರ್ಯಕ್ರಮ ಮುಗಿದ ನಂತರ ನಿರೂಪಕನನ್ನೂ ಕರೆದುಕೊಂಡು ರಾತ್ರಿ ಊಟಕ್ಕೆ ಹೋಗುವುದು ಬಹಳಷ್ಟು ಇದೆ…ಹಹ.

ಸೀರೆ ಪಂಚೆ ಮಿಕ್ಸಿ ಕುಕ್ಕರ್ ದುಡ್ಡು ಬಾಡು ಬಾರುಗಳಿಗಿರುವ ಓಟಿನ ಶಕ್ತಿ, ಸುಳ್ಳು ಮತ್ತು ಆಕರ್ಷಕ ಮಾತುಗಳಿಗಿರುವ ಓಟು ಸೆಳೆಯುವ‌ ಆಕರ್ಷಣೆ ಖಂಡಿತ ನಮ್ಮ ಅಭಿಪ್ರಾಯಗಳಿಗೆ ಇಲ್ಲ……

ಆದ್ದರಿಂದ, ದಯವಿಟ್ಟು ಗೆಳೆಯರೆ, ಚುನಾವಣಾ ಕಾರಣದಿಂದ ನಾವುಗಳು ಮನಸ್ತಾಪ ಮಾಡಿಕೊಳ್ಳುವುದು ಬೇಡ. ನಾವೆಲ್ಲರೂ ಸಾಮಾನ್ಯರು.

ದ್ವೇಷಕ್ಕಿಂತ ಪ್ರೀತಿ ವಿಶ್ವಾಸವೇಮುಖ್ಯ ನೆನಪಿರಲಿ……..

ಚುನಾವಣೆ ಒಂದು ಗುಪ್ತ ಮತದಾನ. ಒಂದಷ್ಟು ಯೋಚಿಸಿ ಅದರಲ್ಲಿ ಭಾಗವಹಿಸಿ. ಯಾರೋ ಅನಾಗರಿಕರಂತೆ ,ಜೈಕಾರದ ಪುಡಾರಿಗಳಂತೆ ವರ್ತಿಸುವುದು ಬೇಡ……ಎಂದಿನಂತೆ ಗೆಳೆತನದ ಘನತೆಯನ್ನು ಕಾಪಾಡೋಣ……..‌‌‌‌‌…‌

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ.

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

45 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

57 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago