ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ, ಸಮಾಜ ಸೇವೆ, ಪರಿಸರ ಮೊದಲಾಗಿ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕೊಂಗಾಡಿಯಪ್ಪನವರು  ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರಗಿದ್ದರು. ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಶಾಲೆ ಮುಂತಾದವುಗಳನ್ನು ಮೈಸೂರು ಮಹಾರಾಜರಿಂದ ಮಂಜೂರು ಮಾಡಿ ಮಾಡಿಸಿದರು. ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದ ಲೋಕಸೇವಾನಿರತ  ಡಿ.ಕೊಂಗಾಡಿಯಪ್ಪ ಅವರನ್ನು ದೊಡ್ಡಬಳ್ಳಾಪುರ ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ದೊಡ್ಡಬಳ್ಳಾಪುರ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ,  ದೊಡ್ಡಬಳ್ಳಾಪುರ ಅಭಿವೃದ್ಧಿಯನ್ನು ಪ್ರಧಾನವಾಗಿ ಚಿಂತಿಸುತ್ತಿದ್ದ, ಮೈಸೂರು ಮಹಾರಾಜರಿಂದ ಅಭಿವೃದ್ಧಿ ಕಾರ್ಯಗಳನ್ನು ಸಕಾರಗೊಳಿಸಿದರು. ಸೇವಾ ಮನೋಭಾವದಿಂದ ಜನಮನ್ನಣೆ ಪಡೆದಿದ್ದ ಕೊಂಗಾಡಿಯಪ್ಪ ಅವರು ಮೈಸೂರು ಮಹಾರಾಜರಿಂದ ಲೋಕಸೇವಾ ನಿರತ ಎಂಬ ಬಿರುದಿಗೆ ಪುರಸ್ಕೃತರಾದರು. ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಅರಿತಿದ್ದ  ಮತ್ತು ಶಿಕ್ಷಕರೂ ಆಗಿದ್ದ ಕೊಂಗಾಡಿಯಪ್ಪ ಅವರು ಎಲ್ಲಾ ವರ್ಗದ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕೊಂಗಾಡಿಯಪ್ಪ ಅವರ ಮನೆ ವಿದ್ಯಾರ್ಥಿನಿಲಯದಂತೆ. ಬಡ ವಿದ್ಯಾರ್ಥಿಗಳು ಅವರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ವಯಸ್ಕರ ಶಿಕ್ಷಣ ಶಾಲೆಯನ್ನು ಸಹ ನಡೆಸುತ್ತಿದ್ದರು.  ಕೊಂಗಾಡಿಯಪ್ಪ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ   ರಸ್ತೆಯ ಬದಿಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿದ್ದರು.. ದೊಡ್ಡಬಳ್ಳಾಪುರದಲ್ಲಿ ಮೈಸೂರು ಸಂಸ್ಥಾನಕ್ಕೆ ಮಾದರಿಯಾದ ಸ್ಕೌಟ್ ಗ್ರೂಪ್ ಸ್ಥಾಪಿಸಿದ್ದರು.  ಕೊಂಗಾಡಿಯಪ್ಪನವರ ಈ ಜನೋಪಯೋಗಿ ಮತ್ತು ಸೇವಾ ಕಾರ್ಯಗಳನ್ನು ಪರಿಗಣಿಸಿದ ಮೈಸೂರು ಮಹಾರಾಜರು  1918ರಲ್ಲಿ ಸಾರ್ವಜನಿಕ ಸೇವಾ ಪದಕ ಮತ್ತು 1931ರಲ್ಲಿ  ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್  ಲೋಕಸೇವಾನಿರತ ಎಂಬ ಬಿರುದು ನೀಡಿ ಗೌರವಿಸಿದರು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಉಪನ್ಯಾಸಕಿ ಪುಪ್ಪಾವತಿ, ಶಿಕ್ಷಕರುಗಳಾದ  ಕೋದಂಡರಾಮ್, ಎಚ್.ಎನ್.ಪ್ರಕಾಶ್, ರಮೇಶ್ ಪೂಜಾರಿ, ವಿದ್ಯಾರ್ಥಿನಿಲಯಪಾಲಕ ಅಣ್ಣಯ್ಯ, ಕಲಾವಿದ   ದರ್ಗಾಜೋಗಿಹಳ್ಳಿ ಮಲ್ಲೇಶ್, ಬಾಶೆಟ್ಟಿಹಳ್ಳಿ ಮಂಜುನಾಥ್, ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು  ಭಾಗವಹಿಸಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

7 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

9 hours ago