ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ, ಸಮಾಜ ಸೇವೆ, ಪರಿಸರ ಮೊದಲಾಗಿ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕೊಂಗಾಡಿಯಪ್ಪನವರು  ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರಗಿದ್ದರು. ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಶಾಲೆ ಮುಂತಾದವುಗಳನ್ನು ಮೈಸೂರು ಮಹಾರಾಜರಿಂದ ಮಂಜೂರು ಮಾಡಿ ಮಾಡಿಸಿದರು. ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದ ಲೋಕಸೇವಾನಿರತ  ಡಿ.ಕೊಂಗಾಡಿಯಪ್ಪ ಅವರನ್ನು ದೊಡ್ಡಬಳ್ಳಾಪುರ ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ದೊಡ್ಡಬಳ್ಳಾಪುರ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ,  ದೊಡ್ಡಬಳ್ಳಾಪುರ ಅಭಿವೃದ್ಧಿಯನ್ನು ಪ್ರಧಾನವಾಗಿ ಚಿಂತಿಸುತ್ತಿದ್ದ, ಮೈಸೂರು ಮಹಾರಾಜರಿಂದ ಅಭಿವೃದ್ಧಿ ಕಾರ್ಯಗಳನ್ನು ಸಕಾರಗೊಳಿಸಿದರು. ಸೇವಾ ಮನೋಭಾವದಿಂದ ಜನಮನ್ನಣೆ ಪಡೆದಿದ್ದ ಕೊಂಗಾಡಿಯಪ್ಪ ಅವರು ಮೈಸೂರು ಮಹಾರಾಜರಿಂದ ಲೋಕಸೇವಾ ನಿರತ ಎಂಬ ಬಿರುದಿಗೆ ಪುರಸ್ಕೃತರಾದರು. ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಅರಿತಿದ್ದ  ಮತ್ತು ಶಿಕ್ಷಕರೂ ಆಗಿದ್ದ ಕೊಂಗಾಡಿಯಪ್ಪ ಅವರು ಎಲ್ಲಾ ವರ್ಗದ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕೊಂಗಾಡಿಯಪ್ಪ ಅವರ ಮನೆ ವಿದ್ಯಾರ್ಥಿನಿಲಯದಂತೆ. ಬಡ ವಿದ್ಯಾರ್ಥಿಗಳು ಅವರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ವಯಸ್ಕರ ಶಿಕ್ಷಣ ಶಾಲೆಯನ್ನು ಸಹ ನಡೆಸುತ್ತಿದ್ದರು.  ಕೊಂಗಾಡಿಯಪ್ಪ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ   ರಸ್ತೆಯ ಬದಿಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿದ್ದರು.. ದೊಡ್ಡಬಳ್ಳಾಪುರದಲ್ಲಿ ಮೈಸೂರು ಸಂಸ್ಥಾನಕ್ಕೆ ಮಾದರಿಯಾದ ಸ್ಕೌಟ್ ಗ್ರೂಪ್ ಸ್ಥಾಪಿಸಿದ್ದರು.  ಕೊಂಗಾಡಿಯಪ್ಪನವರ ಈ ಜನೋಪಯೋಗಿ ಮತ್ತು ಸೇವಾ ಕಾರ್ಯಗಳನ್ನು ಪರಿಗಣಿಸಿದ ಮೈಸೂರು ಮಹಾರಾಜರು  1918ರಲ್ಲಿ ಸಾರ್ವಜನಿಕ ಸೇವಾ ಪದಕ ಮತ್ತು 1931ರಲ್ಲಿ  ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್  ಲೋಕಸೇವಾನಿರತ ಎಂಬ ಬಿರುದು ನೀಡಿ ಗೌರವಿಸಿದರು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಉಪನ್ಯಾಸಕಿ ಪುಪ್ಪಾವತಿ, ಶಿಕ್ಷಕರುಗಳಾದ  ಕೋದಂಡರಾಮ್, ಎಚ್.ಎನ್.ಪ್ರಕಾಶ್, ರಮೇಶ್ ಪೂಜಾರಿ, ವಿದ್ಯಾರ್ಥಿನಿಲಯಪಾಲಕ ಅಣ್ಣಯ್ಯ, ಕಲಾವಿದ   ದರ್ಗಾಜೋಗಿಹಳ್ಳಿ ಮಲ್ಲೇಶ್, ಬಾಶೆಟ್ಟಿಹಳ್ಳಿ ಮಂಜುನಾಥ್, ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು  ಭಾಗವಹಿಸಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

2 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

13 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

13 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

18 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago